ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ; ರೆಡ್‌ ಅರ್ಲಟ್‌ ಘೋಷಣೆ

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ಅವಮಾನ ಇಲಾಖೆ ರೆಡ್‌ ಅರ್ಲಟ್‌ ಘೋಷಿಸಿದೆ.

ರಾಜ್ಯದಲ್ಲಿ ಕೆಲವೆಡೆ ಮಳೆಯ ಆರ್ಭಟ ಜೋರಿದ್ದು, ಕಳೆದ ಎರಡು ದಿನದಿಂದಲೂ ಎಡೆಬಿಡದೆ ಸುರಿಯುತ್ತಿದೆ. ಇನ್ನೊಂದೆಡೆ ಕೇರಳದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ಕರ್ನಾಟಕದ ಡ್ಯಾಂಗಳಿಂದ ನೀರು ಬಿಟ್ಟಿದ್ದು ನಂಜನಗೂಡಿನಲ್ಲೂ ಪ್ರವಾಹ ಸ್ಥಿತಿ ಏರ್ಪಟ್ಟಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಮುನ್ಸೂಚನೆ ಇದ್ದು ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 2 ರಂದು ಆರೆಂಜ್ ಅಲರ್ಟ್‌, ಆಗಸ್ಟ್ 3 ಹಾಗೂ 4 ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇದನ್ನು ಓದಿ : ಉತ್ತರ ಪ್ರದೇಶ : ಜಲಾವೃತವಾದ ರಸ್ತೆಯಲ್ಲಿ ಬೈಕ್​ನಲ್ಲಿ ಬರುತ್ತಿದ್ದ ಮಹಿಳೆಗೆ ಕಿರುಕುಳ ಕೊಟ್ಟ ಪುಂಡರು

ಉತ್ತರ ಒಳನಾಡಿನ ಬೆಳಗಾವಿ ಹಾಗೂ ದಕ್ಷಿಣ ಒಳನಾಡಿನ, ಕೊಡಗು, ಶಿವಮೊಗ್ಗ ಹಾಗೂ ಚಿಕ್ಕಮಗಳೂರಿಗೆ ಮುಂದಿನ ನಾಲ್ಕು ದಿನ ಅಂದರೆ ಆಗಸ್ಟ್‌ 4 ರವರೆಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ.

ರಾಜ್ಯದಲ್ಲಿ ಗಾಳಿಯ ವೇಗ ಗಮಟೆಗೆ 40 ರಿಂದ 50 ಕಿಮೀ ಇರುವ ಸಾಧ್ಯತೆ ಇದ್ದು, ಎಚ್ಚರದಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೇರಳದ ವಯನಾಡಿನ ಭೂಕುಸಿತದ ಭೀಕರತೆ ರಾಜ್ಯದಲ್ಲೂ ಭೀತಿ ಹುಟ್ಟಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಮಳೆಯ ಹಿನ್ನಲೆ ಈಗಾಘಲೇ ಗುಡ್ಡ ಕುಸಿತದ ಅವಘಡಗಳು ಸಂಭವಿಸಿದ್ದು ಗುಡ್ ಪ್ರದೇಶದಲ್ಲಿ ವಾಸಿಸುವ ಜನರು ಎಚ್ಚರದಿಂದ ಇರುವಂತೆ ತಿಳಿಸಿದೆ.

ಇದನ್ನು ನೋಡಿ : ನದಿಯಂತಾದ ರಸ್ತೆ : ಕುದುರೆ ಮುಖ ಕ್ರಾಸ್ ನಿಂದ ಜೋಕಟ್ಟೆ ಕಡೆಗೆ ತೆರಳುವ ರಸ್ತೆJanashakthi Media

 

Donate Janashakthi Media

Leave a Reply

Your email address will not be published. Required fields are marked *