ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ; ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಜೂನ್ 2ರ ನಂತರ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೇರಳದಲ್ಲಿ ನೈರುತ್ಯ ಮುಂಗಾರು ಚುರುಕಾಗಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜೂನ್ 2ರಿಂದ ಕರಾವಳಿ ಹಾಗೂ ದಕ್ಷಿಣ ಭಾಗದಲ್ಲಿ ಮುಂಗಾರು ಆರಂಭ ಆಗಲಿದೆ. ಹೀಗಾಗಿ ಜೂನ್ 2ರಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸದ್ಯ ಕರ್ನಾಟಕದಲ್ಲಿ ಪೂರ್ವ ಮುಂಗಾರು ಮಳೆ ಇಳಿಕೆಯಾಗಿದೆ. ಇದು ಮುಂಗಾರು ಪ್ರವೇಶಕ್ಕೆ ಮುನ್ಸೂಚನೆಯಾಗಿದೆ. ಈ ಬಾರಿ ಬೆಂಗಳೂರು ಸೇರಿದಂತೆ ಹಳೆ ಮೈಸೂರು ಭಾಗದಲ್ಲಿ ಕಟ್ಟೆಚ್ಚರ ಅಗತ್ಯವಿದ್ದು, ಬಿಬಿಎಂಪಿಗೆ ಮುನ್ನಚ್ಚರಿಕೆ ವಹಿಸುವಂತೆ ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ಸೂಚನೆ ನೀಡಿದ್ದಾರೆ.

ಜೂನ್ 2ರಿಂದ ಬಿರುಗಾಳಿ ಸಹಿತ ಮಳೆಯಾಗುವ ಸಂಭವವಿದೆ. ಗಂಟೆಗೆ 40-50 kmph ವೇಗದಲ್ಲಿ ನಗರದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಹೀಗಾಗಿ ಒಣ ಮರಗಳು, ಶಿಥಿಲ ಕಟ್ಟಡಗಳ ಬಗ್ಗೆ ನಿಗಾವಹಿಸಲು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.

ಇದನ್ನು ಓದಿ: ಜೂನ್ 1ಕ್ಕೆ ಹೊಳೆನರಸೀಪುರದ ನಿವಾಸದಲ್ಲಿರುವಂತೆ ಭವಾನಿ ರೇವಣ್ಣಗೆ ಎಸ್‌ಐಟಿ ನೊಟೀಸ್

ಈ ವರ್ಷದ ನೈರುತ್ಯ ಮುಂಗಾರು ಅಧಿಕೃತವಾಗಿ ಕೇರಳಕ್ಕೆ ಆಗಮಿಸಿದ್ದು, ಗುರುವಾರ ಈಶಾನ್ಯ ಭಾರತದ ಬಹುತೇಕ ಭಾಗಗಳಿಗೆ ಕಾಲಿಟ್ಟಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಧಿಕೃತವಾಗಿ ಪ್ರಕಟಿಸಿದೆ. ಈ ವರ್ಷದ ಮುಂಗಾರು ಹವಾಮಾನ ಇಲಾಖೆ ನೀಡಿದ್ದ ಮುನ್ಸೂಚನೆಯ ಮುನ್ನವೇ ಬಂದಿದೆ.

ಈ ಋತುವಿನಲ್ಲಿ ಕೇರಳವು ಸಾಮಾನ್ಯ ಮಾನ್ಸೂನ್ ಮಳೆಯನ್ನು ಸುಮಾರು 6 ಪ್ರತಿಶತದಷ್ಟು ಹೆಚ್ಚು ಪಡೆಯುವ ನಿರೀಕ್ಷೆಯಿದೆ. ಕೇರಳದಲ್ಲಿ ಕಳೆದ ಕೆಲವು ದಿನಗಳಿಂದ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ರಾಜ್ಯದೆಲ್ಲೆಡೆ ಹಾನಿಯಾಗಿದೆ. ಮುನ್ಸೂಚನೆಗಳ ಪ್ರಕಾರ ಜೂನ್ 2 ರವರೆಗೆ ಕೇರಳದ ಹೆಚ್ಚಿನ ಸ್ಥಳಗಳಲ್ಲಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಗಾಳಿಯ ವೇಗವು ದಕ್ಷಿಣ ಕೇರಳ ಕರಾವಳಿಯಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ಇದನ್ನು ನೋಡಿ : ಸರಣಿ ಲೈಂಗಿಕ ದೌರ್ಜನ್ಯ ನಡೆಸಿರುವ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಒತ್ತಾಯಿಸಿ ಸಹಸ್ರಾರು ಜನರಿಂದ ಬೃಹತ್ ಹೋರಾಟ

Donate Janashakthi Media

Leave a Reply

Your email address will not be published. Required fields are marked *