ರಾಜ್ಯದಲ್ಲಿ ಜೂನ್ 11ರಿಂದ ಭಾರಿ ಮಳೆ: ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಮಳೆಯು ಕಡಿಮೆಯಾಗಿದ್ದೂ, ಇದೀಗ ಮತ್ತೆ ಜೂನ್ 11ರಿಂದ ಚುರುಕಾಗಲಿದೆ. ಜೂನ್ 11ರಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿಗದಿತ ಅವಧಿಗಿಂತ ಮೊದಲೇ ರಾಜ್ಯಕ್ಕೆ ಕಾಲಿಟ್ಟು ಆರಂಭದಲ್ಲಿ ಭಾರಿ ಮಳೆ ಆಗುವ ಮುನ್ಸೂಚನೆ ನೀಡಿದ್ದ ಮುಂಗಾರು ಒಂದೇ ವಾರದಲ್ಲಿ ಕ್ಷೀಣಿಸಿದ್ದು, ರೈತರಲ್ಲಿ ಆತಂಕ ಮೂಡಿಸಿದೆ.

ಇದನ್ನು ಓದಿ: ರೈತರಿಗೆ ಪಿಎಂ ಕಿಸಾನ್‌ ಯೋಜನೆ ಜಾರಿ: 20ನೇ ಕಂತಿನ ಹಣ ಜೂನ್‌ ತಿಂಗಳಲ್ಲಿ ಜಮೆ

ರಾಜ್ಯದಲ್ಲಿ ಸೋಮವಾರದಿಂದ ಮುಂಗಾರು ಮತ್ತೆ ಚುರುಕಾಗುವ ಸಾಧ್ಯತೆಯಿದ್ದು, ಜೂನ್ 11ರಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 11ರಂದು ಬಳ್ಳಾರಿ, ದಾವಣಗೆರೆ, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜೂನ್ 12ರಂದು ಚಿಕ್ಕಬಳ್ಳಾಪುರ, ಬಳ್ಳಾರಿ, ವಿಜಯಪುರ, ಕಲಬುರಗಿ, ಬೆಳಗಾವಿ, ಬಾಗಲಕೋಟೆ, ಹಾಗೂ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇದನ್ನೂ ನೋಡಿ: ಶಾಂತಿಯ ನಡಿಗೆ ಮಂಗಳೂರಿನ ಕಡೆಗೆ – ಸಮಾನ ಮನಸ್ಕರ ನಿರ್ಧಾರ Janashakthi Media

Donate Janashakthi Media

Leave a Reply

Your email address will not be published. Required fields are marked *