ಹೆಡಗೇವಾರ್‌ ಲೇಖನ ಪಠ್ಯದಲ್ಲಿದ್ದರೆ ಏನು ತಪ್ಪು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

  • ಪಠ್ಯಪುಸ್ತಕ ಸಮಿತಿ ರದ್ದು ಮಾಡಲ್ಲ. ಹೊಸ ಸಮಿತಿಯ ರಚನೆ ಅವಶ್ಯಕತೆ ಇಲ್ಲ
  • ನಮ್ಮದು ಬಸವ ಪಥದ ಸರ್ಕಾರ ಬೊಮ್ಮಾಯಿ ಹೇಳಿಕೆ

ಚಿತ್ರದುರ್ಗ: ‘ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಸ್ಥಾಪಕ ಕೇಶವ ಬಲಿರಾಮ್‌ ಹೆಡಗೇವಾರ್‌ ಅವರಿಗೆ ಸಂಬಂಧಿಸಿದ ಪಾಠವನ್ನು ಕೈಬಿಡುವುದಿಲ್ಲ. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತೆ ಪುನರುಚ್ಚರಿಸಿದ್ದಾರೆ.

ಹಿರಿಯೂರು ತಾಲ್ಲೂಕಿನ ದೇವರಕೊಟ್ಟ ಗ್ರಾಮದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಪಠ್ಯಪುಸ್ತಕ ಸಮಿತಿ ಕಾರ್ಯ ಮುಗಿದಿದೆ. ಹೀಗಾಗಿ ಅದನ್ನು ವಿಸರ್ಜನೆ ಮಾಡಲಾಗಿದೆಯೇ ಹೊರತು ರದ್ದು ಮಾಡಿಲ್ಲ. ಹೊಸ ಸಮಿತಿ ರಚನೆಯ ಅವಶ್ಯಕತೆ ಇಲ್ಲ’ ಎಂದು ಪ್ರತಿಕ್ರಿಯಿಸಿದ್ದಾರೆ.

‘ಪಠ್ಯಪುಸ್ತಕ ವಿಚಾರದಲ್ಲಿ ಚರ್ಚೆ ನಡೆದ ಬಳಿಕ ಮರು ಪರಿಶೀಲಿಸುವುದಾಗಿ ಆರಂಭದಲ್ಲೇ ಹೇಳಿದ್ದೆ. ವಾಸ್ತವಾಂಶದ ಆಧಾರದ ಮೇರೆಗೆ ಕೆಲ ಬದಲಾವಣೆ ಮಾಡಲಾಗುತ್ತಿದೆ. ಇದನ್ನ ಮಠಾಧೀಶರ ಒತ್ತಡಕ್ಕೆ ಮಣಿದು ಈ ತೀರ್ಮಾನ ಕೈಗೊಂಡಿಲ್ಲ. ಏಕೆಂದರೆ ‘ಪಠ್ಯಪುಸ್ತಕವನ್ನು ನಾನೂ ಗಮನಿಸಿರಲಿಲ್ಲ. ಶುಕ್ರವಾರ ಪರಿಶೀಲಿಸಿದೆ. ಅದರಲ್ಲಿ  ಪ್ರೊ.ಬರಗೂರು ರಾಮಚಂದ್ರಪ್ಪ ಪರಿಷ್ಕರಣಾ ಸಮಿತಿ ಹಾಗೂ ಈಗಿನ ಸಮಿತಿ ರಚಿಸಿರುವ ಬಸವಣ್ಣ ಪಠ್ಯದಲ್ಲಿ ಒಂದು ವಾಕ್ಯದ ವ್ಯತ್ಯಾಸವಿದೆ.

ʻಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ಅವರಿಗೆ ಇದನ್ನು ಮನವರಿಕೆ ಮಾಡಿಕೊಡಲಾಗಿದೆ’  ಬಸವಣ್ಣ ನವರ ಹಲವು ಅತ್ಯುತ್ತಮ ವಚನಗಳು ಪಠ್ಯದಲ್ಲಿವೆ. ನಾಡಿನ ಮಠಾಧೀಶರು, ಸ್ವಾಮೀಜಿಗಳ ಅಭಿಪ್ರಾಯ ಪಡೆದು ಬಸವಣ್ಣನ ನಿಜ ಇತಿಹಾಸವನ್ನು ಪಠ್ಯದಲ್ಲಿ ಸೇರಿಸಲಾಗುತ್ತದೆ. ‘ನಮ್ಮದು ಬಸವ ಪಥದ ಸರ್ಕಾರ ಎಂದು ಮೊದಲೇ ಹೇಳಿದ್ದೇನೆʼ ಎಂದರು.

Donate Janashakthi Media

Leave a Reply

Your email address will not be published. Required fields are marked *