ದ್ವೇಷ ಭಾಷಣ: ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ದಕ್ಷಿಣ ಕನ್ನಡ: ಕೋಮು ದ್ವೇಷದ ಮಾತುಗಳನ್ನಾಡಿದ ಸಂಬಂಧ ಯೂಟ್ಯೂಬ್‌ ಚಾನಲ್‌ನಲ್ಲಿ ಪ್ರಸಾರವಾದ ವಿಡಿಯೋ ಆಧರಿಸಿ ಆರ್‌ಎಸ್‌ಎಸ್‌ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಫೆಬ್ರವರಿ 6ರಂದು ಕರ್ನಾಟಕ ಹೈಕೋರ್ಟ್‌ ತಡೆ ನೀಡಿದೆ. ದ್ವೇಷ

ಜಿಲ್ಲೆಯ ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಪ್ರಭಾಕರ್‌ ಭಟ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಡೆಸಿತು.

ವಾದ ಆಲಿಸಿದ ಪೀಠವು “ಪ್ರಭಾಕರ್‌ ಭಟ್‌ ಭಾಷಣ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಮಾಡಿದ್ದಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಸಂಬಂಧಿತ ಪ್ರಕರಣದಲ್ಲಿ ಬಿಎನ್‌ಎಸ್‌ಎಸ್‌ ಸೆಕ್ಷನ್‌ 35(3) ನೋಟಿಸ್‌ ನೀಡಿ, ಆರೋಪಿಯನ್ನು ಆಲಿಸದ ಹೊರತು ಬಂಧಿಸುವಂತಿಲ್ಲ ಎಂದು ತೆಲಂಗಾಣ ಹೈಕೋರ್ಟ್‌ ರೂಪಿಸಿರುವ ಮಾರ್ಗಸೂಚಿಗಳನ್ನು ಈಚೆಗೆ ಸುಪ್ರೀಂ ಕೋರ್ಟ್‌ ಎತ್ತಿಹಿಡಿದಿದೆ. ಹಾಲಿ ಪ್ರಕರಣದಲ್ಲಿ ಈ ಪ್ರಕ್ರಿಯೆ ಪಾಲಿಸಲಾಗಿಲ್ಲ. ಸತ್ಯೇಂದರ್‌ ಕುಮಾರ್‌ ಆಂಟಿಲ್‌ ಪ್ರಕರಣದ ತೀರ್ಪು ಆಧರಿಸಿ, ಪ್ರಭಾಕರ್‌ ಭಟ್‌ ವಿರುದ್ಧದ ಎಲ್ಲಾ ತನಿಖೆ ಮತ್ತು ಪ್ರಕ್ರಿಯೆಗೆ ತಡೆ ನೀಡಲಾಗಿದೆ” ಎಂದು ನ್ಯಾಯಾಲಯ ಆದೇಶಿಸಿದೆ.

ಇದನ್ನೂ ಓದಿ: ಫೆ. 7ರಂದು ಓಲಾ, ಉಬರ್, ರ‍್ಯಾಪಿಡೋ ಸೇವೆ ಬಂದ್; ಸಾರಿಗೆಯಲ್ಲಿ ವ್ಯತ್ಯಯ

ಪ್ರಕರಣದ ಹಿನ್ನೆಲೆಪ್ರಭಾಕರ್‌ ಭಟ್‌ ವಿರುದ್ಧದ ದೂರಿನಲ್ಲಿ,ಪುತ್ತೂರಿನ ವಿವೇಕಾನಂದ ಕಾಲೇಜಿನ ಆವರಣದಲ್ಲಿ ವಿವೇಕಾನಂದ ಜಯಂತಿಯಲ್ಲಿ ಭಾಗವಹಿಸಿದ್ದ ಪ್ರಭಾಕರ್‌ ಭಟ್‌ ಅವರು ಮುಸ್ಲಿಮ್‌, ಕ್ರಿಶ್ಚಿಯನ್‌ ಸಮುದಾಯಗಳ ವಿರುದ್ಧ ದ್ವೇಷ ಹರಡುವಂತ ಭಾಷಣ ಮಾಡಿದ್ದಾರೆ.

ಮೊದಲಿಗೆ ಮೊಘಲರು ಆನಂತರ ಕ್ರಿಶ್ಚಿಯನ್ನರು ದಾಳಿ ನಡೆಸಿದ್ದಾರೆ. ಪ್ರತ್ಯೇಕ ಪಾಕಿಸ್ತಾನ ನೀಡದೇ ಇದ್ದರೆ ಹಿಂದೂಗಳ ಮೇಲೆ ದಾಳಿ ಮಾಡುತ್ತೇವೆ ಎಂದು ಹೇಳಿದ್ದರು.

ದೇವಸ್ಥಾನ ಒಡೆದು, ಗೋವು ಕತ್ತರಿಸಿ, ತಾಯಂದಿರ ಮೇಲೆ ಅತ್ಯಾಚಾರ ಮಾಡಿದ್ದಾರೆ. ಲಕ್ಷಾಂತರ ಹಿಂದೂಗಳ ಹತ್ಯೆ ಮಾಡಿದ್ದಾರೆ. ಆವತ್ತಿನ ಚಿತ್ರ ಮತ್ತೆ ಇಂದೂ ಕಾಣುತ್ತಿದೆ ಎಂದು 12.01.2026ರಂದು ಭಾಷಣ ಮಾಡಿದ್ದರು. ಈ ಭಾಷಣವನ್ನು ವಿಕಸನ ಟಿವಿಯು ಯೂಟ್ಯೂಬ್‌ನಲ್ಲಿ ಪ್ರಸಾರ ಮಾಡಿತ್ತು ಎಂದು ಆರೋಪಿಸಲಾಗಿತ್ತು.

ಇದನ್ನು ಆಧರಿಸಿ ಕಲ್ಲಡ್ಕ ಪ್ರಭಾಕರ್‌ ಭಟ್‌, ವಿಕಸನ ಯೂಟ್ಯೂಬ್‌ ಮತ್ತು ಕಾರ್ಯಕ್ರಮದ ಸಂಘಟಕರ ವಿರುದ್ಧ ಬಿಎನ್‌ಎಸ್‌ ಸೆಕ್ಷನ್‌ಗಳಾದ 196,299,302,353(2) ಜೊತೆಗೆ 3(5) ಅಡಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ನೋಡಿ: 60 ವರ್ಷದ ಉಳುಮೆಗೆ ಹಕ್ಕಿಲ್ಲವೇ? ಕಾರೆಕೆರೆ ಕಾವಲು ದಲಿತರ ನ್ಯಾಯದ ಕೂಗು Janashakthi Media

Donate Janashakthi Media

Leave a Reply

Your email address will not be published. Required fields are marked *