ಹಿಜಾಬ್ ವಿವಾದವನ್ನು ಬಿಜೆಪಿಗರು ದೊಡ್ಡದು ಮಾಡ್ತಾದಿದ್ದಾರೆ – ಸಿದ್ದರಾಮಯ್ಯ

ಬೆಂಗಳೂರು : ಸಮವಸ್ತ್ರ ಕಡ್ಡಾಯ ಮಾಡಬೇಕು ಎಂದು ಎಲ್ಲೂ ಹೇಳಿಲ್ಲ. ಇದು ಸಂವಿಧಾನದಲ್ಲಿ ನೀಡಿರುವ ಮೂಲಭೂತ ಹಕ್ಕಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿವಾದವನ್ನು ಬಿಜೆಪಿಗರು ದೊಡ್ಡದು ಮಾಡಿಸ್ತಿದ್ದಾರೆ. ಸಂಘಪರಿವಾರದ ಪ್ರಯೋಗಾಲಯವೇ ಕರಾವಳಿ. ಸರ್ಕಾರ ಇದಕ್ಕೆಲ್ಲ ಕುಮ್ಮಕ್ಕು ನೀಡಬಾರದು. ಶಿಕ್ಷಣದಲ್ಲಿ ರಾಜಕೀಯ ಬೆರಸಬಾರದು ಎಂದು ಆರೋಪ ಮಾಡಿದ್ದಾರೆ.

ಈ ವಿವಾದಕ್ಕೆ ಸಂಬಂಧಪಟ್ಟಂತೆ ಕುಂದಾಪುರದ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರು ಗೇಟ್​ ಬಂದ್​ ಮಾಡಿದ್ದು, ಸಂವಿಧಾನ ವಿರೋಧ. ಮಕ್ಕಳ ವಿದ್ಯಾಭ್ಯಾಸವನ್ನು ತಡೆಗಟ್ಟುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *