ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯ ಅವಾಂತರಕ್ಕೆ ಒಂದೇ ದಿನ ಇಬ್ಬರು ಬಲಿಯಾಗಿರುವ ಘಟನೆ ಮೇ 29 ಗುರುವಾರದಂದು ನಡೆದಿದೆ. ಇದೀಗ ಅವಶೇಷಗಳಡಿ ಸಿಲುಕಿದ್ದ ತಾಯಿ ಅಶ್ವಿನಿ ಹಾಗೂ ಮಗು ಆರುಷ್ ರಕ್ಷಣೆ ಮಾಡಲಾಗಿದೆ. ಭಾರೀ
ಗುಡ್ಡ ಕುಸಿತದಿಂದ ಮನೆ ಬಿದ್ದು ಅವಶೇಷಗಳಡಿ ತಾಯಿ, ಮಗು ಸಿಲುಕಿದ್ದು, 8 ಗಂಟೆಗಳಿಂದ ಜೀವನ್ಮರಣದ ಹೋರಾಟ ನಡೆಸಿದ್ದರು. ಇದೀಗ ತಾಯಿ ಹಾಗೂ ಮಗುವನ್ನು ರಕ್ಷಣೆ ಮಾಡಲಾಗಿದೆ.
ಇದನ್ನೂ ಓದಿ: ಬೆಂಗಳೂರು| ಎ-ಖಾತಾ – ಬಿ-ಖಾತಾ ಎರಡರ ನಡುವಿನ ವ್ಯತ್ಯಾಸವೇನು?
ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಉರುಮನೆ ಕೋಡಿ ಎಂಬಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಗುಡ್ಡ ಕುಸಿದು ಮನೆಯ ಅವಶೇಷಗಳಡಿ ಸಿಲುಕಿದ್ದ ಆರ್ಯನ್ ಸಾವನ್ನಪ್ಪಿದ್ದಾನೆ.
ಮಂಗಳೂರು ಸಮೀಪದ ಮೋಂಟೆಪದವು ಬಳಿ ಗುಡ್ಡ ಕುಸಿದು ಸಿಲುಕಿದ್ದವರಲ್ಲಿ ಪ್ರೇಮಾ ಪೂಜಾರಿ (52) ಸಾವನ್ನಪ್ಪಿದ್ದಾರೆ. ಮಂಗಳೂರು ಸುತ್ತಾಮುತ್ತಾ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ಮಳೆ ಹಿನ್ನೆಲೆ ಗುಡ್ಡ ಕುಸಿದಿದ್ದು, ಘಟನಾ ಸ್ಥಳಕ್ಕೆ ಎನ್ ಡಿ ಆರ್ ಎಫ್ ಸಿಬ್ಬಂದಿಗಳು ಧಾವಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಣ್ಣಿನಡಮೂವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಇಬ್ಬರನ್ನು ರಕ್ಷಣೆ ಮಾಡಲಾಗಿದೆ.
ಇದನ್ನೂ ನೋಡಿ: ಫ್ಯಾಸಿಸಂ ಹುಟ್ಟು ಹೇಗಾಯಿತು ಮತ್ತು ಅದನ್ನು ಮೊದಲಿನಿಂದಲೂ ವಿರೋಧಿಸಿದ ರಾಜಕೀಯ ಶಕ್ತಿಗಳು ಯಾವುವು? Janashakthi