ಬೆಳ್ತಂಗಡಿ: ಲವ್‌ ಜಿಹಾದ್‌ ಆರೋಪ-ಹಿಂದೂಯೇತರರ ವಾಹನ ಪ್ರವೇಶಕ್ಕೆ ನಿಷೇಧ

  • ಹಿಂದೂಗಳಲ್ಲದವರಿಗೆ ಸೌತಡ್ಕ ಗ್ರಾಮದ ಮಹಾಗಣಪತಿ ದೇಗುಲಕ್ಕೆ ಪ್ರವೇಶವಿಲ್ಲ
  • ಹಿಂದುಗಳಲ್ಲದವರ ವಾಹನಗಳು ದೇವಸ್ಥಾನ ಪ್ರವೇಶಿಸುವಂತಿಲ್ಲ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಕೋಮ ಸೌಹಾರ್ದ ಕೆಡಿಸುವ ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಬೆಳ್ತಂಗಡಿ ತಾಲೂಕಿನ ಸೌತಡ್ಕ ಗ್ರಾಮದ ಮಹಾಗಣಪತಿ ದೇಗುಲಕ್ಕೆ ಹಿಂದೂಯೇತರರ ಹಿಂದೂಯೇತರರ ಆಟೋ, ಟ್ಯಾಕ್ಸಿ ಮತ್ತು ವಾಹನ ಪ್ರವೇಶಿಸದಂತೆ ನಿರ್ಬಂಧ ವಿಧಿಸಿರುವ ನಾಮಫಲಕ ಅಳವಡಿಸಿರುವುದು ಕಂಡುಬಂದಿದೆ.

ಸೌತಡ್ಕ ಗ್ರಾಮದ ಮಹಾಗಣಪತಿ ದೇವಸ್ಥಾನದ ಎದುರುಗಡೆ ಹಿಂದೂ ಸಂಘಟನೆಗಳು ನಿರ್ಬಂಧದ ನಾಮಫಲಕ ಅಳವಡಿಸಿದ್ದಾರೆ. ದೇವಸ್ಥಾನದ ಪ್ರವೇಶ ದ್ವಾರದ ಬಳಿಯೇ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದವರು ಫಲಕ ಅಳವಡಿಸಿದ್ದು, ಅದರಲ್ಲಿ ಅನ್ಯ ಕೋಮಿನವರು ಪ್ರವೇಶವನ್ನು ಮಾಡಿ ಭಕ್ತಾದಿಗಳನ್ನು ಲವ್‌ ಜಿಹಾದ್‌ ಹಾಗೂ ದೃಷ್ಕೃತ್ಯ ನಡೆದಿರುವುದು ಕಂಡು ಬಂದಿರುವುದರಿಂದ ಹಿಂದೂಯೇತರರ ಆಟೋ, ಟ್ಯಾಕ್ಸಿ ಮತ್ತು ವಾಹನ ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ ಎಂದು ಬರೆಯಲಾಗಿದೆ.

ಕೆಲ ದಿನಗಳ ಹಿಂದೆ ಇಲ್ಲಿನ ಮುಸ್ಲಿಂ ಆಟೋ ಚಾಲಕ ಲವ್ ಜಿಹಾದ್ ಎಸಗಿದ ಆರೋಪ ಕೇಳಿ ಬಂದಿತ್ತು. ಆ ಬಳಿಕ ಇದೀಗ ಅನ್ಯ ಕೋಮಿನವರ ವಾಹನ ಪ್ರವೇಶಕ್ಕೆ ನಿರ್ಬಂಧ ಹೇರಿರುವ ನಾಮಫಲಕ ಕಂಡು ಬಂದಿದೆ. ಸೌತಡ್ಕ ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನವಾಗಿದೆ.

ಈ ಕುರಿತು ಸೌತಡ್ಕ ಆಡಳಿತ ಮಂಡಳಿಯಲ್ಲಿ ಪ್ರಶ್ನಿಸಿದಾಗ ಸಾರ್ವಜನಿಕ ಪ್ರದೇಶದಲ್ಲಿ ಅಳವಡಿಸಿದ್ದರಿಂದ ದೇವಸ್ಥಾನಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕಟೌಟ್ ಫೋಟೋ ಹರಿದಾಡುತ್ತಿದ್ದು, ಕಟೌಟ್ ಅಳವಡಿಸಿರುವವರ ಕುರಿತು ಸಂಬಂಧ ಪಟ್ಟ ಪೊಲೀಸ್ ಇಲಾಖೆ ವಿಚಾರಣೆಗೆ ಮುಂದಾಗಿದೆ ಎಂದು ತಿಳಿದು ಬಂದಿದೆ.

Donate Janashakthi Media

Leave a Reply

Your email address will not be published. Required fields are marked *