ವಿವಾದಾತ್ಮಕ ಹೇಳಿಕೆ: ಹಿಂದೂ ಜಾಗರಣಾ ವೇದಿಕೆ ಮುಖಂಡ ಬಂಧನ

ಡುಪಿ: ದೆಹಲಿ ಸ್ಫೋಟ ಖಂಡಿಸಿ ನಡೆಸಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರತ್ನಾಕರ್ ಅಮೀನ್, ವಿವಾದಾತ್ಮಕ ಹೇಳಿಕೆ ನೀಡಿದ್ದಕಾರಣ ಹಿಂದೂ ಜಾಗರಣಾ ವೇದಿಕೆ ಮುಖಂಡ ರತ್ನಾಕರ್ ಅಮೀನ್ ರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.

ಮದರಸಾ, ಮಸೀದಿಯಲ್ಲಿ ಹಿಂದೂಗಳ ಹತ್ಯೆಗೆ ಪ್ರಚೋದನೆ ಎಂದು ಪ್ರಚೋದನಕಾರಿ ಭಾಷಣ ಮಾಡಿದ್ದರು. ದ್ವೇಷ, ಅಸೂಯೆ ಉಂಟುಮಾಡುವ ಹೇಳಿಕೆ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತ ಕೇಸ್ ದಾಖಲಾಗಿತ್ತು.

ಇದನ್ನೂ ಓದಿ: ಕೂಡ್ಲಿಗಿ |ಎರಡು ತಿಂಗಳ ಬಾಕಿ ವೇತನ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನೆ -ಎಐಟಿಯುಸಿ

ಈ ಹಿನ್ನೆಲೆಯಲ್ಲಿ ಉಡುಪಿಯ ಅಜೇಕಾರಿನ ನಿವಾಸಿ , ಹಿಂದೂ ಜಾಗರಣಾ ವೇದಿಕೆ ಮುಖಂಡ ರತ್ನಾಕರ್ ಅವರನ್ನು ಬಂಧಿಸಲಾಗಿದೆ.

ಇದನ್ನೂ ನೋಡಿ: Rumours about the Death of Theater are exaggerated”: Sudhanva Deshpande of Jana Natya Manch

Donate Janashakthi Media

Leave a Reply

Your email address will not be published. Required fields are marked *