ಹಿಂದುಳಿದ ಸಮುದಾಯದವರಿಗೆ ವಿಶೇಷ ಯೋಜನೆ: ಬಸವರಾಯ ಬೊಮ್ಮಾಯಿ

ಬೆಂಗಳೂರು: ಪರಿಶಿಷ್ಟ ಮತ್ತು ಹಿಂದುಳಿದ ಸಮುದಾಯದವರಿಗೆ ಸರ್ಕಾರದ ಮಟ್ಟದಲ್ಲಿ ಸಾಕಷ್ಟು ಅವಕಾಶಗಳು ಕೊರತೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಂತಹ ಸಮುದಾಯದವರ ಶಿಕ್ಷಣ, ಉದ್ಯೋಗ ಮತ್ತು ಉದ್ಯಿಮೆಗಳಲ್ಲಿ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ವಿಶೇಷ ಯೋಜನೆಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸೌಧದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ನಡೆದ ದೇವರಾಜ ಅರಸುರವರ 106ನೇ ಜನ್ಮದಿನ ಅಂಗವಾಗಿ ನಡೆದ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ತಿಳಿಸಿದರು.

ಸರ್ಕಾರಿ ವಲಯದಲ್ಲಿ ಅವಕಾಶಗಳು ಕಡಿಮೆ ಆಗುತ್ತಿವೆ. ಆದ್ದರಿಂದ ಬಡ ಮತ್ತು ಬಿಪಿಎಲ್‌ ವರ್ಗದ ಜನರಿಗಾಗಿ ಶಿಕ್ಷಣ, ಉದ್ಯಮ ಮತ್ತು ಉದ್ಯಮದಲ್ಲಿ ತೊಡಗಿಸಿಕೊಳ್ಳಲು ಕಾರ್ಯಕ್ರಮ ಹಮ್ಮಿಕೊಳ್ಳುವುದರ ಜತೆಗೆ ಆರ್ಥಿಕ ಸಹಾಯ ಮಾಡುವ ಯೋಜನೆ ರೂಪಿಸಲು ಯೋಜಿಸಲಾಗಿದೆ ಎಂದು ಬೊಮ್ಮಾಯಿ ಹೇಳಿದರು.

ಇದನ್ನು ಓದಿ: ರಾಜ್ಯ ಸಚಿವ ಸಂಪುಟ ಸಭೆ: ಆನಂದ್‌ ಸಿಂಗ್‌, ಶ್ರೀರಾಮುಲು, ಆರ್‌ ಅಶೋಕ ಗೈರು

ಪರಿಶಿಷ್ಟ ಜಾತಿ, ವರ್ಗಗಳು, ಹಿಂದುಳಿದವರು ಮತ್ತು ಅಲ್ಪಸಂಖ್ಯಾತರಿಗಾಗಿ ಮೀಸಲಾಗಿರುವ ವಸತಿ ಶಾಲೆಗಳನ್ನು ಉತ್ತಮಪಡಿಸಲಾಗುವುದು. ಆಧುನಿಕ ಕಾಲದ ಉದ್ಯಮ ಮತ್ತು ಉದ್ಯೋಗಗಳಿಗೆ ತಕ್ಕಂತೆ ಶಿಕ್ಷಣದ ವ್ಯವಸ್ಥೆ ರೂಪಿಸಲಾಗುವುದು. ಅಂತರರಾಷ್ಟ್ರೀಯ ಗುಣಮಟ್ಟದ ಉನ್ನತ ಶಿಕ್ಷಣ ನೀಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ಅಲೆಮಾರಿ ಜನಾಂಗದ ಮಕ್ಕಳಿಗೆ ಶಿಕ್ಷಣ ನೀಡಲು ಈ ವರ್ಷ ಮೂರು ವಸತಿ ಶಾಲೆಗಳನ್ನು ಆರಂಭಿಸಲಾಗುವುದು. ಈಗಾಗಲೇ ನಾಲ್ಕು ವಸತಿ ಶಾಲೆಗಳಿವೆ. ಈ ಶಾಲೆಗಳಲ್ಲಿ ಎರಡು ಶಾಲೆಗಳಿಗೆ ಸ್ವಂತ ಕಟ್ಟಡಗಳಿವೆ. ಇನ್ನೆರಡು ಶಾಲೆಗಳಿಗೆ ಕಟ್ಟಡ ಹೊಂದಲು ತಲಾ ₹6 ಕೋಟಿ ನೀಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಸಿಇಟಿ ಮತ್ತು ನೀಟ್‌ನಂತಹ ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದ ಎದುರಿಸಲು ಅನುಕೂಲವಾಗುವಂತೆ ವಿದ್ಯಾರ್ಥಿಗಳನ್ನು ತಯಾರಿಗೊಳಿಸಲಾಗುವುದು. ಇದಕ್ಕಾಗುಣಮಟ್ಟದ ಶಿಕ್ಷಣ ನೀತಿ ರೂಪಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ 2019-20ನೇ ಸಾಲಿನಲ್ಲಿ ಬಸವಪ್ರಭು ಲಕನಗೌಡ ಪಾಟೀಲ್, 2020-21ನೇ ಸಾಲಿನಲ್ಲಿ ಸುಶೀಲಮ್ಮಗೆ ದೇವರಾಜ ಅರಸು ಪ್ರಶಸ್ತಿ, 2021-22ನೇ ಸಾಲಿನಲ್ಲಿ ಭಾಸ್ಕರ್ ದಾಸ್ ಎಕ್ಕಾರ್‌ ಅವರಿಗೆ ದೇವರಾಜ ಅರಸು ಪ್ರಶಸ್ತಿ ನೀಡಿ ಗೌರವಿಸಲಾಯಿತು.

Donate Janashakthi Media

Leave a Reply

Your email address will not be published. Required fields are marked *