ಹೊಸವರ್ಷಾಚರಣೆ ಸಂಭ್ರಮಕ್ಕೆ ಕೊರೊನಾ ಕರಿನೆರಳು

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗೆ ಕೊರೊನಾ ಕರಿನೆರಳು ಬಿದ್ದಿದೆ. ಕೊರೊನಾ ಅಟ್ಟಹಾಸದಿಂದಾಗಿ ಸಂಭ್ರಮಾಚರಣೆಗೆ ಅವಕಾಶ ನೀಡದೆ ಕಟ್ಟುನಿಟ್ಟಿನ ಎಚ್ಚರಿಕೆ ವಹಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಇಂದು‌ ಮಧ್ಯಾಹ್ನ 12 ಗಂಟೆಯಿಂದಲೇ 144 ಸೆಕ್ಷನ್ ಜಾರಿಯಲ್ಲಿರಲಿದೆ. ಸಂಜೆ 6ರ ಬದಲು‌ ಮಧ್ಯಾಹ್ನ 12 ರಿಂದಲೇ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ. ಇಂದು ಮಧ್ಯಾಹ್ನ 12ರಿಂದ ನಾಳೆ ಮುಂಜಾನೆ 6ರವರೆಗೂ ನಿಷೇಧಾಜ್ಞೆ ಮುಂದುವರೆಯಲಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಕೊರೊನಾ ವೈರಸ್ ಹಾಗೂ ಬ್ರಿಟನ್ ವೈರಸ್ ಹಿನ್ನೆಲೆ ಹೊಸ ವರ್ಷದ ಸಂಭ್ರಮಾಚರಣೆಯು ಸರಕಾರ ಹಾಗೂ ಪೊಲೀಸ್ ಇಲಾಖೆಯವರಲ್ಲಿ ಭೀತಿ ಹುಟ್ಟಿಸಿದ್ದು ಹೀಗಾಗಿ ಬೆಂಗಳೂರು ನಗರದಾದ್ಯಂತ ಖಾಕಿ ಸರ್ಪಗಾವಲು ಹಾಕಲಾದೆ.

Donate Janashakthi Media

Leave a Reply

Your email address will not be published. Required fields are marked *