ಹುಬ್ಬಳ್ಳಿ | ಗ್ರಾಹಕರಿಗೆ ಬಟ್ಟೆ ತೋರಿಸುವಾಗ ಹೃದಯಾಘಾತ – ಸಿಬ್ಬಂದಿ ಸಾವು

ಹುಬ್ಬಳ್ಳಿ : ಹುಬ್ಬಳ್ಳಿಯ ಕಂಚಗಾರ ಗಲ್ಲಿಯಲ್ಲಿ ಗ್ರಾಹಕರಿಗೆ ಬಟ್ಟೆ ತೋರಿಸುವಾಗಲೇ ಕುಸಿದು ಬಿದ್ದು ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಇದನ್ನು ಓದಿ: ರಾಜ್ಯದ 9 ವಿಶ್ವವಿದ್ಯಾನಿಲಯ ಮುಚ್ಚುವುದು ಸುಲಭದ ಕೆಲಸವಲ್ಲ: ಅಶ್ವಥ್ ನಾರಾಯಣ್

ಇತ್ತೀಚೆಗೆ ದೇಶದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದ್ದು, ಮೃತರನ್ನು ರಾಜಸ್ಥಾನ ಮೂಲದ ಭವರ್ ಸಿಂಗ್ (43) ಎಂದು ಗುರುತಿಸಲಾಗಿದೆ. ನಗರದ ಕಂಚಗಾರ ಗಲ್ಲಿಯಲ್ಲಿರುವ ಎನ್​ಆರ್ ಸಾರಿ ಸೆಂಟರ್​ನಲ್ಲಿ ಗ್ರಾಹಕರಿಗೆ ಬಟ್ಟೆ ತೋರಿಸುವಾಗ ಏಕಾಏಕಿ ಕೂತಲ್ಲೇ ಕುಸಿದು ಬಿದ್ದಿದ್ದಾರೆ.

ಇದನ್ನು ಓದಿ: ರಾಹುಲ್ ಗೆ ಅವಮಾನಿಸಿದ್ದ ಜಗ್ಗಿ ವಾಸುದೇವ್, ಅಮಿತ್ ಶಾ ಜೊತೆ ವೇದಿಕೆ ಹಂಚಿಕೆ; ಇದೆಲ್ಲಾ ಸರಿ ಅಲ್ಲ, ಡಿಕೆಶಿಗೆ ಹೈಕಮಾಂಡ್ ವಾರ್ನಿಂಗ್

ಕೂಡಲೇ ಗ್ರಾಹಕರು ಉಳಿದ ಸಿಬ್ಬಂದಿಯನ್ನು ಕರೆದಿದ್ದಾರೆ. ಈ ವೇಳೆ ಬಂದು ನೋಡಿದಾಗ ಭವರ್ ಕೊನೆಯುಸಿರು ಎಳೆದಿದ್ದರು. ಸದ್ಯ ಹೃದಯಘಾತದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Donate Janashakthi Media

Leave a Reply

Your email address will not be published. Required fields are marked *