ಚಿಕ್ಕೋಡಿ: ಸುಮಾರು 10 ರಿಂದ 12 ಅಡಿ ಉದ್ದದ ಮೊಸಳೆಯೊಂದು ಪ್ರತ್ಯಕ್ಷವಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ
ಗುಡಸ ಗ್ರಾಮದ ಹೊರವಲಯದ ಘಟಪ್ರಭಾ ನದಿಯಲ್ಲಿ ನಡೆದಿದೆ.
ಇದನ್ನೂ ಓದಿ:-ಬೆಂಗಳೂರು| ರೈಲಿನಲ್ಲಿ ಹೋಳಿ ಆಚರಣೆ; ಇಬ್ಬರ ಬಂಧನ
ಬೇಸಿಗೆಯಲ್ಲಿ ನದಿ ನೀರು ಕಡಿಮೆಯಾದ ಹಿನ್ನೆಲೆಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದೆ. ಈ ಮೊಸಳೆಯನ್ನು ನೋಡಿದ ಗುಡಸ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ. ನದಿ ತೀರದಲ್ಲಿರುವ ಜಮೀನುಗಳಿಗೆ ತೆರಳಲು ರೈತರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.
ಇದನ್ನೂ ಓದಿ:-ನವದೆಹಲಿ| ಅಂಗಡಿ ವ್ಯಾಪಾರಿಯಿಂದ 80 ಲಕ್ಷ ರೂ ದರೋಡೆ
ಮೊಸಳೆ ಹಿಡಿದು ಬೇರೆಡೆ ಸ್ಥಳಾಂತರಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಗ್ರಾಮಸ್ಥರ ಮನವಿಯನ್ನು ಮಾಡಿಕೊಂಡಿದ್ದಾರೆ.