ಕಾಂಗ್ರೆಸ್ ಸರ್ಕಾರದ ಕ್ಷೀರಭಾಗ್ಯ ಯೋಜನೆ 10 ವರ್ಷ ಪೂರೈಕೆ ನನಗಿದು ಹೆಮ್ಮೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗದ ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ಉದ್ದೇಶವನ್ನಿಟ್ಟುಕೊಂಡು ಆರಂಭಗೊಂಡ ಈ ಒಂದು ಮಹತ್ವದ ಕ್ಷೀರಭಾಗ್ಯ ಯೋಜನೆ ಇಂದಿಗೆ ಹತ್ತು ವರ್ಷ ಪೂರೈಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇದನ್ನೂ ಓದಿ:ಸಿಎಂ ಸಿದ್ದರಾಮಯ್ಯ ಕಾನೂನು ಸಲಹೆಗಾರರಾಗಿ ಶಾಸಕ ಪೊನ್ನಣ್ಣ ನೇಮಕ

ಕ್ಷೀರಭಾಗ್ಯ ಯೋಜನೆ ಜಾರಿಗೆ ಸಂಬಂಧ ಟ್ವೀಟ್‌ ಮಾಡಿರುವ ಅವರು ಕರ್ನಾಟಕದ ಗ್ರಾಮೀಣ ಪ್ರದೇಶದ ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಣೆಯ ಜೊತೆಗೆ ಹೈನುಗಾರಿಕೆಯನ್ನು ಮತ್ತಷ್ಟು ಲಾಭದಾಯಕ ಉದ್ಯೋಗವಾಗಿಸಿ, ಅವರನ್ನು ಪ್ರೋತ್ಸಾಹಿಸುವ ಉದ್ದೇಶದೊಂದಿಗೆ 2013ರ ಆಗಸ್ಟ್ 1 ರಂದು ನಮ್ಮ‌ ಸರ್ಕಾರವು ಶಾಲಾ ಮಕ್ಕಳಿಗೆ ನಿತ್ಯ ಕೆನೆಭರಿತ ಹಾಲು ನೀಡುವ ಕ್ಷೀರಧಾರೆ ಯೋಜನೆಯನ್ನು ಜಾರಿಗೆ ನೀಡಿತ್ತು. ನಮ್ಮ ಈ ಯೋಜನೆ ಜಾರಿಯಾಗಿ ಇಂದಿಗೆ ಹತ್ತು ವರ್ಷಗಳು ತುಂಬಿದೆ. ಪ್ರತಿನಿತ್ಯ ಒಂದು ಕೋಟಿಗೂ ಅಧಿಕ ಮಕ್ಕಳಿಗೆ ಹಾಲು ನೀಡುವ ಮೂಲಕ ಅವರ ಶೈಕ್ಷಣಿಕ ಸಾಧನೆಗೆ ನೆರವಾದ ಸಂತೃಪ್ತಿ ನನ್ನದು ಎಂದು ಹೇಳಿದ್ದಾರೆ.

ವಿಶ್ವ ಡೇರಿ ಫೆಡರೇಷನ್‌ನಿಂದ ನೀಡಲಾಗುವ “ಅಂತಾರಾಷ್ಟ್ರೀಯ ಅತ್ಯುತ್ತಮ ಯೋಜನೆ ಪ್ರಶಸ್ತಿ – 2022” ಅನ್ನು ನಮ್ಮ ಈ ಯೋಜನೆ ಪಡೆದಿದ್ದು,ಯೋಜನೆಯನ್ನು ಜಾರಿಗೆ ಕೊಟ್ಟ ನನಗಿದು ಹೆಮ್ಮೆಯುಂಟು ಮಾಡಿದೆ ಎಂದು ತಮ್ಮ ಟ್ವಿಟರ್‌ನಲ್ಲಿ ಜುಲೈ-1 ರಂದು ಸಿಎಂ ಸಿದ್ದರಾಮಯ್ಯ ಅವರು ಬರೆದುಕೊಂಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *