ಬಿಜೆಪಿಗೆ ಸೇರ್ಪಡೆಯಾಗುತ್ತೇನೆ : ಸಂಸದೆ ಸುಮಲತಾ

ಮಂಡ್ಯ: ಮಂಡ್ಯದ ಬದಲಾವಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಬಿಜೆಪಿ ಪಕ್ಷಕ್ಕೆ ಇಂದಿನಿಂದ ನನ್ನ ಸಂಪೂರ್ಣ ಬೆಂಬಲ ಇರುತ್ತೇನೆ , ಪಕ್ಷೇತರವಾಗಿ ಸ್ಪರ್ಧಿಸುವ ಹಟ ಇಲ್ಲ, ಗೌರವ ಇಲ್ಲದ ಕಾಂಗ್ರೆಸ್ ಪಕ್ಷ ಸೇರಲ್ಲ ಎಂದು ಸಂಸದೆ ಸುಮಲತಾ ಬುಧವಾರ ಘೋಷಿಸಿದರು. ಸುಮಲತಾ

ಕಾಳಿಕಾಂಬಾ ಸಮುದಾಯ ಭವನದಲ್ಲಿ ನಡೆದ ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು ‘ಅಭಿವೃದ್ಧಿಯೇ ಮೂಲಮಂತ್ರ ಎಂದು ದೇಶವನ್ನು ಮುನ್ನಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರೇ ನನಗೆ ಸ್ಫೂರ್ತಿ. ಟಿಕೆಟ್ ಸಿಗದಿದ್ದರೆ ರಾಜಕಾರಣಿಗಳು‌ ಪಕ್ಷ ಬದಲಾಯಿಸುತ್ತಾರೆ. ಆದರೆ ನಾನು ಅಂತಹ ರಾಜಕಾರಣಿ ಅಲ್ಲ. ಟಿಕೆಟ್ ಬಿಟ್ಟುಕೊಟ್ಟು ಬಿಜೆಪಿ ಸೇರುತ್ತಿದ್ದೇನೆ’ ಎಂದರು.

ಇದನ್ನು ಓದಿ : ಕಾಂಗ್ರೆಸ್ ನವರು ರಾಹುಲ್ ಗಾಂಧಿಯನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಿ : ಬಸವರಾಜ ಬೊಮ್ಮಾಯಿ

‘ನಾನು ಅಂಬರೀಷ್ ಅವರ ಪತ್ನಿ, ಮಳವಳ್ಳಿ ಹುಚ್ಚೇಗೌಡರ ಸೊಸೆ. ಆ ಸ್ಥಾನವನ್ನು ಯಾರೂ ಕಿತ್ತುಕೊಳ್ಳಲು ಸಾಧ್ಯವಿಲ್ಲ. ನನಗೆ ಸ್ಥಾನ ಮುಖ್ಯವಲ್ಲ, ಮಂಡ್ಯ ಜಿಲ್ಲೆ ಜನರ ಪ್ರೀತಿಯೇ ಮುಖ್ಯ. ನನಗೆ ಬೆಂಗಳೂರು ಉತ್ತರ, ಚಿಕ್ಕಬಳ್ಳಾಪುರ, ಮೈಸೂರು ಕ್ಷೇತ್ರದಲ್ಲಿ ಸ್ಪರ್ಧೆಗೆ ಅವಕಾಶ ನೀಡಲಾಗಿತ್ತು.‌ ಆದರೆ ನಾನು ಎಲ್ಲವನ್ನೂ ನಿರಾಕರಿಸಿದೆ’ ಎಂದರು.

ಇದನ್ನು ನೋಡಿ : ಮೋದಿ ಸಾಹೇಬರೆ… ನಮ್ಮ ಪ್ರಶ್ನೆಗಳಿಗೆ ಜವಾಬು ಹೇಳಿ – ಅಂಬಣ್ಣ ಅರೋಳಿಕರ್ ಹಾಡು Janashakthi Media

Donate Janashakthi Media

Leave a Reply

Your email address will not be published. Required fields are marked *