ನಾನು ರಕ್ತದಲ್ಲೇ ಬರೆದುಕೊಡುತ್ತೇನೆ, ಕೈ ಪಕ್ಷ ಅಧಿಕಾರಕ್ಕೆ ಬರಲ್ಲ : ಸಚಿವ ಸುಧಾಕರ್‌

ಚಿಕ್ಕಬಳ್ಳಾಪುರ : ನಾನು ರಕ್ತದಲ್ಲೇ ಬರೆದುಕೊಡುತ್ತೇನೆ, ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದರು.

ಚಿಕ್ಕಬಳ್ಳಾಪುರ ತಾಲೂಕಿನ ಗೊಲ್ಲಹಳ್ಳಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ನಂತರ ಮಾತನಾಡಿದ ಅವರು, ಡಿ.ಕೆ ಶಿವಕುಮಾರ್ ರಕ್ತದಲ್ಲಿ ಬರೆದುಕೊಟ್ರೆ ನಾನು ಸಹ ಅದೇ ರಕ್ತದಲ್ಲಿ ಬರೆದು ಕೊಡುತ್ತೇನೆ.

ಕಾಂಗ್ರೆಸ್ ಯಾವುದೇ ಕಾರಣಕ್ಕೂ ಸರ್ಕಾರ ರಚನೆ ಮಾಡಲ್ಲ. ಈ ಬಾರಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಿ ಆಡಳಿತ ಮಾಡುತ್ತೇವೆ. ಕಾಂಗ್ರೆಸ್ ಮುಳುಗುವ ಹಡುಗು. ಹೀಗಾಗಿ ಡಿ.ಕೆ ಶಿವಕುಮಾರ್ ಸಹ ಬಿಜೆಪಿಗೆ ಬರುವ ದಿನಗಳು ದೂರ ಇಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದರು.

ಇದನ್ನೂ ಓದಿ : ಸೋಂಕಿಗೆ ಹೆದರಿ ಯಾರೂ ಆತ್ಮಹತ್ಯೆ ಮಾಡಿಕೊಳ್ಳದಿರಿ: ಸಚಿವ ಸುಧಾಕರ್‌

ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಲಿಂಗಾಯತ-ಒಕ್ಕಲಿಗರ ಭಿಕ್ಷುಕರಾ? ಎಂದು ಕೇಳಿದ ಡಿಕೆಶಿಗೆ ತಿರುಗೇಟು ನೀಡಿದ ಅವರು, ನೀವೇ ಪವರ್ ಮಿನಿಸ್ಟರ್ ಆಗಿದ್ರಲ್ಲಾ? ಒಕ್ಕಲಿಗ ಸಮುದಾಯದ ಮಗ ಅಂತೀರಲ್ಲ? ಯಾಕೆ 1% ಮೀಸಲಾತಿ ಹೆಚ್ಚಳ ಮಾಡಿಸಲಿಲ್ಲ? ಮೀಸಲಾತಿ ಹೆಚ್ಚಳ ಮಾಡಿರುವ ಹೆಮ್ಮೆ ಬಿಜೆಪಿಗಿದೆ ಎಂದರು.

Donate Janashakthi Media

Leave a Reply

Your email address will not be published. Required fields are marked *