ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ರಾಜೀನಾಮೆ ಕೇಳಿದ್ರೆ ಕೊಡ್ತಾರಾ: ಶಾಸಕ ಜಿ. ಟಿ. ದೇವೇಗೌಡ

ಮೈಸೂರು: ಸಿಎಂ ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡಬೇಕು? ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ರಾಜೀನಾಮೆ ಕೇಳಿದ್ರೆ ಕೊಡ್ತಾರಾ? ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಸ್ವಪಕ್ಷದವರ ವಿರುದ್ಧವೇ ಟಾಂಗ್ ಕೊಟ್ಟಿದ್ದಾರೆ.

ಮೈಸೂರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಎಫ್ ಐಆರ್ ದಾಖಲಾದ ತಕ್ಷಣ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಿಲ್ಲ. ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ರಾಜೀನಾಮೆ ಕೇಳಿದ್ರೆ ಕೊಡ್ತಾರಾ? ಸಿಎಂ ಸಿದ್ದರಾಮಯ್ಯ ಯಾಕೆ ರಾಜೀನಾಮೆ ಕೊಡಬೇಕು? ಎಂದು ಸ್ವಪಕ್ಷದವರ ವಿರುದ್ಧವೇ ಟಾಂಗ್ ಕೊಟ್ಟಿದ್ದಾರೆ.

ಇದನ್ನೂ ಓದಿ: ತಂದೆಯ ಚಿತೆಗೆ ಬೆಂಕಿ ಇಡಲು ಹಣ ಕೇಳಿದ ಮಗ – ಕೊನೆಗೆ ತಾನೇ ಚಿತೆಗೆ ಬೆಂಕಿ ಇರಿಸಿದ ಪತ್ನಿ

ಬಿಜೆಪಿ-ಜೆಡಿಎಸ್ ನವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಯಾರ ಮೆಲೆ ಎಫ್ ಐಆರ್ ದಾಖಲಾಗಿದೆಯೋ ಅವರೆಲ್ಲ ವಿಧಾನಸೌಧದ ಬಳಿ ನಿಂತುಕೊಳ್ಳಿ. ಕೇಂದ್ರ ಸರ್ಕಾರದಿಂದ ಏನು ಯೋಜನೆ ತರಬೇಕು ಅದನ್ನು ಯೋಚಿಸಿ, ಸಿದ್ದರಾಮಯ್ಯ ಕಾಲದಲ್ಲಿ ಅಭಿವೃದ್ಧಿ ಆದಷ್ಟು ಯಾವತ್ತೂ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ್ದಾರೆ.

ಇದನ್ನೂ ನೋಡಿ: ಸಾಹಿತ್ಯ ಮತ್ತು ಸೌಹಾರ್ದತೆ – ಡಾ. ನಾಗಭೂಷಣ್‌ ಬಗ್ಗನಡುJanashakthi Media

Donate Janashakthi Media

Leave a Reply

Your email address will not be published. Required fields are marked *