ಚಿತ್ರದುರ್ಗ: ನಗರದ ಚಳ್ಳಕೆರೆ ಗೇಟ್ ಬಳಿ ಅಕ್ರಮವಾಗಿ ಇಡಲಾಗಿದ್ದ ಗೂಡಂಗಡಿಗಳ ತೆರವನ್ನು ಬೆಂಗಳೂರಿನಲ್ಲಿ ಕೋಗಿಲು ಬಡಾವಣೆಯಲ್ಲಿ ನಿರ್ಮಿಸಿದ್ದ ಶೆಡ್ ತೆರವು ವಿಚಾರ ದೇಶದಾದ್ಯಂತ ಸದ್ದು ಮಾಡುತ್ತಿರುವ ಸಂದರ್ಭದಲ್ಲೇ ಮಾಡಲಾಗಿದೆ.
ನಗರಸಭೆ ಆಯುಕ್ತೆ ಲಕ್ಷ್ಮೀ ನೇತೃತ್ವದಲ್ಲಿ ತೆರವು ಕಾರ್ಯಾಚರಣೆ ನಡೆದಿದೆ. ಜೆಸಿಬಿ ಬಳಸಿ ಹಣ್ಣು, ತರಕಾರಿ, ಟೀಸ್ಟಾಲ್, ಗುಜರಿ ಅಂಗಡಿಗಳ ತೆರವು ಮಾಡಲಾಗಿದೆ.
ಇದನ್ನೂ ಓದಿ: ಕಟ್ಟಡವೊಂದರಲ್ಲಿ ಭೀಕರ ಅಗ್ನಿ ಅವಘಡ; ಹಲವು ಅಂಗಡಿಗಳು ಸುಟ್ಟು ಭಸ್ಮ
ನಗರಸಭೆ ಅಧಿಕಾರಿಗಳ ವಿರುದ್ಧ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ, ಕೋರ್ಟ್ ಆದೇಶದಂತೆ ನಾವು ಗೂಡಂಗಡಿ ತೆರವು ಮಾಡುತ್ತಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇದನ್ನೂ ನೋಡಿ: ಕುವೆಂಪು ಜನ್ಮ ದಿನ | “ಬನ್ನಿ ಬನ್ನಿ ಲೋಕಗುರುಗಳೆಲ್ಲ ಬನ್ನಿ” ಹಾಡು : ಎಚ್.ವಿ. ನಟರಾಜ Janashakthi Media
