ಆರನೇ ಹಂತದಲ್ಲಿ ಹಕ್ಕು ಚಲಾಯಿಸಿದ ಘಟಾನುಘಟಿಗಳು

ನವದೆಹಲಿ: ಆರನೇ ಹಂತದಲ್ಲಿ ಘಟಾನುಘಟಿಗಳು ಖ್ಯಾತರಾದಿಯಾಗಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಸೇರಿದಂತೆ ಹಲವು ರಾಜಕೀಯ ನಾಯಕರು ಮತದಾನ ಮಾಡಿದ್ದಾರೆ. ಆರನೇ 

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯ ಪ್ರೆಸಿಡೆಂಟ್ಸ್ ಎಸ್ಟೇಟ್‍ನಲ್ಲಿರುವ ರಾಜೇಂದ್ರ ಪ್ರಸಾದ್ ಕೇಂದ್ರೀಯ ವಿದ್ಯಾಲಯದ ಮತಗಟ್ಟೆಯಲ್ಲಿ ತಮ್ಮ ಮತ ಚಲಾಯಿಸಿದರು. ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಪತ್ನಿ ಸುದೇಶ ಧನ್ಕರ್ ಜೊತೆ ಆಗಮಿಸಿ ದೆಹಲಿಯ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಇದನ್ನೂ ಓದಿ: ಗೂಗಲ್‌ ಡೂಡಲ್‌ನಲ್ಲಿ 6ನೇ ಹಂತದ ಮತದಾನದ ಗುರುತು

ದೆಹಲಿಯ ಮೌಲಾನಾ ಆಕಾದ್ ರಸ್ತೆಯಲ್ಲಿರುವ ನಿರ್ಮಾಣ್ ಭವನದ ಮತಗಟ್ಟೆಯಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ಮತ ಚಲಾಯಿಸಿದರು. ಒಡಿಶಾ ಸಿಎಂ ನವೀನ್ ಪಟ್ನಾಯಕ್ ಭುವನೇಶ್ವರದಲ್ಲಿ ಮತದಾನ ಮಾಡಿದರು.

ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್, ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮಕ್ಕಳಾದ ರೈಹಾನ್ ರಾಜೀವ್ ವಾದ್ರಾ ಮತ್ತು ಮಿರಾಯಾ ವಾದ್ರಾ ಮೊದಲ ಬಾರಿ ತಮ್ಮ ಹಕ್ಕು ಚಲಾಯಿಸಿದರು.

ಎಂಟು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇಂದು ಚುನಾವಣೆ ನಡೆಯುತ್ತಿದ್ದು, ಉತ್ತರ ಪ್ರದೇಶದ 14 ಸ್ಥಾನ, ಪ. ಬಂಗಾಳದ  8 ಕ್ಷೇತ್ರ, ಬಿಹಾರದ 8, ಒಡಿಶಾದ 6 ಮತ್ತು ಜಾರ್ಖಂಡ್‌ ನ 4 ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದೆ.

ಇದನ್ನೂ ನೋಡಿ: ದೇವೇಗೌಡ್ರೆ ಜನ ನಿಮಗೆ ಅಧಿಕಾರ ಕೊಟ್ರು – ನೀವು ವಿಕೃತಿ ಕಾಮಿಯನ್ನು ಕೊಟ್ರಿ. ನಿಮಗೆ ನಾವು ತಕ್ಕ ಪಾಠ ಕಲಿಸುತ್ತೇವೆ.

Donate Janashakthi Media

Leave a Reply

Your email address will not be published. Required fields are marked *