ಮೈಸೂರಿನಲ್ಲಿ ಇಂಟೆಲಿಜೆನ್ಸ್ ಬ್ಯೂರೊದ ‌ನಿವೃತ್ತ ಅಧಿಕಾರಿ ಕೊಲೆ, ಕಾರು ಗುದ್ದಿಸಿ ಹಂತಕರು ನಾಪತ್ತೆ

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಕೇಂದ್ರ ಇಂಟೆಲಿಜೆನ್ಸ್ ಬ್ಯೂರೊದ ‌ನಿವೃತ್ತ ಅಧಿಕಾರಿಯೋರ್ವರನ್ನು ಅಪಘಾತದ ರೀತಿಯಲ್ಲಿ ಬಿಂಬಿಸಿ ಕೊಲೆ ಮಾಡಲಾಗಿದೆ. 83 ವರ್ಷದ ಆರ್.ಎಸ್.ಕುಲಕರ್ಣಿ ಎಂಬುವರೇ ಕೊಲೆಯಾದ ನಿವೃತ್ತ ಅಧಿಕಾರಿ.‌

ಮೈಸೂರಿನ ಮಾನಸ ಗಂಗೋತ್ರಿ ಕ್ಯಾಂಪಸ್‌ನ ಕಂಪ್ಯೂಟರ್ ಸೈನ್ಸ್ ವಿಭಾಗದ ಪಕ್ಕದ ರಸ್ತೆಯಲ್ಲಿ ಕುಲಕರ್ಣಿಯವರು ವಾಕಿಂಗ್ ಮಾಡುತ್ತಿದ್ದಾಗ ಅಪಘಾತವೆಸಗಲಾಗಿದೆ. ಕಾರು ಡಿಕ್ಕಿ ಹೊಡೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಂಪ್ಯೂಟರ್ ಸೈನ್ಸ್ ವಿಭಾಗದ ಪಕ್ಕ ವಾಕಿಂಗ್​ ಮಾಡ್ತಿದ್ರು, ರಸ್ತೆ ಬದಿಯಲ್ಲಿ ನಿಂತರೂ ಹಂತಕರು ವೇಗವಾಗಿ ಕಾರು ನುಗ್ಗಿಸಿದ್ದಾರೆ. ಈ ಹಿನ್ನಿಲೆ ನಿವೃತ್ತ ಅಧಿಕಾರಿ ಆರ್​​​.ಎಸ್​.ಕುಲಕರ್ಣಿ ನಾಲ್ಕೈದು ಅಡಿ ದೂರ ಹಾರಿಬಿದ್ದಿದ್ದಾರೆ.

ಸಿ.ಸಿ.ಕ್ಯಾಮರಾಗಳಲ್ಲಿ ದಾಖಲಾಗಿದ್ದ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಬೆಚ್ಚಿ ಬೀಳಿಸುವ ಸಂಗತಿ ಬೆಳಕಿಗೆ ‌ಬಂದಿದೆ. ನಂಬರ್ ಪ್ಲೇಟ್ ಇಲ್ಲದ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಈ ರೀತಿಯ ದುಷ್ಕೃತ್ಯವೆಸಗಿದ್ದಾರೆ. ಕುಲಕರ್ಣಿಯವರು ರಸ್ತೆ ಬದಿಯಲ್ಲಿ ನಿಂತಿದ್ದರೂ ಸಹ ಅಪಘಾತವೆಸಗಿ ಪರಾರಿಯಾಗಿದ್ದಾರೆ. ಘಟನಾ ಸ್ಥಳದಲ್ಲಿ ಕೃತ್ಯವೆಸಗಿದ ಕಾರಿನ ಮಿರರ್ ಪತ್ತೆಯಾಗಿದೆ.

ಪ್ರಕಣರದ ಬಗ್ಗೆ ಎಲ್ಲಾ ಆಯಾಮಗಳಲ್ಲೂ ತನಿಖೆ ಆರಂಭಿಸಿದ್ದೇವೆ. ಎಸಿಪಿ ನೇತೃತ್ವದಲ್ಲಿ ಮೂವರು ಪೊಲೀಸ್ ಅಧಿಕಾರಿಗಳ ತಂಡವನ್ನು ರಚಿಸಲಾಗಿದೆ. ಶೀಘ್ರವೇ ಪ್ರಕರಣವನ್ನು ಭೇದಿಸಲಿದ್ದೇವೆ ಅಂತ ಕಮಿಷನರ್ ಚಂದ್ರಗುಪ್ತ ಹೇಳಿದ್ದಾರೆ.

ಕುಲಕರ್ಣಿಯವರು ಸೇವೆಯಿಂದ ನಿವೃತ್ತಿಯಾಗಿ 23 ವರ್ಷಗಳಾಗಿವೆ. ಇವರ ಕೊಲೆಗೆ ವೃತ್ತಿ ವೈಷಮ್ಯ ಕಾರಣವೇ ಅಥವಾ ವೈಯುಕ್ತಿಕ ದ್ವೇಷ ಕಾರಣವೇ ಎಂದು ಈಗಲೇ ಹೇಳಲಾಗದು ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ ಚಂದ್ರಗುಪ್ತ ತಿಳಿಸಿದ್ದಾರೆ.

ಈ ಸಂಬಂಧ ಜಯಲಕ್ಷ್ಮಿಪುರಂ ಪೋಲಿಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಪೋಲಿಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *