ಬೆಂಗಳೂರು: ರಾಜ್ಯ ಸರ್ಕಾರವು ಪರಿಶಿಷ್ಟ ಸಮುದಾಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಒಳ ಮೀಸಲಾತಿಯ ಸಮೀಕ್ಷೆ ಆರಂಭಿಸಿದೆ. ಮನೆ ಮನೆಗೂ ತೆರಳಿ ಜಾತಿ ಸಮೀಕ್ಷೆ ಮಾಡಲು ನಿರ್ಧರಿಸಲಾಗಿದೆ.
ಒಳ ಮೀಸಲಾತಿ ಕುರಿತಾಗಿ ಏಕಸದಸ್ಯ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ ದಾಸ್ ಸಂದೇಶ ಒಂದನ್ನು ರವಾನಿಸಿದ್ದಾರೆ.
ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯ ಅಪಾರ್ಟ್ಮೆಂಟ್ಗಳಲ್ಲಿ ಸಮೀಕ್ಷೆಗೆ ಹೋದವರಿಗೆ ಮಾಹಿತಿ ನೀಡಲು ನಿರಾಕರಿಸಿದರೆ ಅಥವಾ ಸಮೀಕ್ಷೆಗೆ ಅಡ್ಡಿಪಡಿಸಿದರೆ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ. ಮೀಸಲಾತಿಯ
ಇದನ್ನೂ ಓದಿ: 5ನೇ ಅತಿ ಎತ್ತರದ ಪರ್ವತ ಏರಿದ ಐಟಿಬಿಪಿ ಯೋಧರು: 150 ಕೆಜಿ ಪ್ಲಾಸ್ಟಿಕ್ ಕಸ ಸಂಗ್ರಹ
ಅಗತ್ಯ ಬಿದ್ದರೆ ಅಂತಹ ಅಪಾರ್ಟ್ಮೆಂಟ್ಗಳ ವಿದ್ಯುತ್ ಮತ್ತು ಕುಡಿಯುವ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಹೀಗಾಗಿ ಸಮೀಕ್ಷೆಗಾಗಿ ಸರ್ಕಾರದ ಸಿಬ್ಬಂದಿ ಆಗಮಿಸಿದಾಗ ಎಲ್ಲ ನಾಗರಿಕರು ಸಂಪೂರ್ಣವಾಗಿ ಸಹಕರಿಸಬೇಕು ಎಂದು ಒಳ ಮೀಸಲಾತಿ ನಾಗಮೋಹನ ದಾಸ್ ಅವರು ತಿಳಿಸಿದ್ದಾರೆ.
ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ನಿವೃತ್ತ ನ್ಯಾ. ನಾಗಮೋಹನ್ ದಾಸ್ ಅವರ ಸಮಿತಿಯು 104 ಪುಟಗಳ ಮಧ್ಯಂತರ ವರದಿಯನ್ನು ಕಳೆದ ಮಾರ್ಚ್ 27ರಂದು ಸಲ್ಲಿಸಿದ್ದು ಗೊತ್ತೇ ಇದೆ.
ಇದನ್ನೂ ನೋಡಿ: ಪಹಲ್ಗಾಮ ಹತ್ಯೆ ಮತ್ತು ಸೇನಾ ಸಂಘರ್ಷ, ಯುದ್ಧೋನ್ಮಾದ ಮತ್ತು ಉನ್ಮಾದ ರಾಷ್ಟ್ರೀಯತೆ…Janashakthi Media