ಮುಂದಿನ ಸಿಎಂ ಸತೀಶ್​ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ ಶಾಸಕ

ಬೆಳಗಾವಿ –ಶಾಸಕ ವಿಶ್ವಾಸ್ ವೈದ್ಯ ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆಗುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಹೊಸ ಬಾಂಬ್ ಸಿಡಿಸಿದ್ದು ,ಇದು ಹೊಸ ಸಂಚಲನ ಸೃಷ್ಠಿಸಿದೆ.

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿರುವ ಕಾಂಗ್ರೆಸ್‌ ಶಾಸಕ ವಿಶ್ವಾಸ್ ವೈದ್ಯ, ಆ ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟೋ ಸತ್ಯವೋ, ಬೆಳಗಾವಿಯಿಂದ ಸತೀಶ್ ಜಾರಕಿಹೊಳಿ ಅಣ್ಣಾ ಮುಖ್ಯಮಂತ್ರಿ ಆಗುವುದು ಕೂಡ ಅಷ್ಟೇ ಸತ್ಯ ಎಂದು ಹೇಳಿದ್ದಾರೆ.

ದೀಪಾವಳಿ ಹಾಗೂ ರಾಜ್ಯೋತ್ಸವ ನಿಮಿತ್ತ ರಸಮಂಜರಿ ಕಾರ್ಯಕ್ರಮ ಆಯೋಜನೆಯಾಗಿತ್ತು. ಕಾರ್ಯಕ್ರಮ ಉದ್ಘಾಟಕರಾಗಿ ಭಾಗಿಯಾಗಿದ್ದ ಸವದತ್ತಿ ಶಾಸಕ ಸಿಎಂ ವಿಚಾರದ ಬಗ್ಗೆ ಯಾರು ಕೂಡಾ ಮಾತನಾಡಬಾರದು ಎಂದು ಆದೇಶಿಸಿದ್ದರೂ ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂದಿದ್ದಾರೆ.

ಇದನ್ನೂ ಓದಿ : ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆಯೆ? ದುಬೈಯಲ್ಲಿ ತಂತ್ರ ನಡೆಯುತ್ತಿದೆಯೆ?

ಈ ಭಾಗದ ನಾಯಕ, ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಯಕ್ರಮಕ್ಕೆ ಆಗಮಿಸಬೇಕಿತ್ತು. ಬೇರೆ ಕೆಲಸದಿಂದ ವಿದೇಶಕ್ಕೆ ಪ್ರಯಾಣ ಬೆಳೆಸಿದ್ದು ಕಾರ್ಯಕ್ರಮಕ್ಕೆ ಹೋಗುವಂತೆ ಕರೆ ಮಾಡಿದ್ದರು ಎಂದ ವಿಶ್ವಾಸ್ ವೈದ್ಯ, ಈ ಸರ್ಕಾರದಲ್ಲಿ ಅತ್ಯಂತ ಪ್ರಭಾವಿ ನಾಯಕರಾಗಿ ಸತೀಶ್ ಜಾರಕಿಹೊಳಿ ಹೊರ ಹೊಮ್ಮುತ್ತಿದ್ದಾರೆ. ಅವರಿಗೆ ಹೆಚ್ಚಿನ ಶಕ್ತಿಯನ್ನ ಕೊಟ್ಟು ಕರ್ನಾಟಕದ ಮುಖ್ಯಮಂತ್ರಿಯಾಗಿ ನೋಡಬೇಕು ಅಂತಾ ಹೇಳ್ತಿದ್ದಾರೆ. ಅದು ನೂರಕ್ಕೆ ನೂರರಷ್ಟು ಸತ್ಯ. ಆ ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟೋ ಸತ್ಯವೋ, ಮುಂದಿನ ದಿನಗಳಲ್ಲಿ ಈ ಬೆಳಗಾವಿ ಗಡಿ ಭಾಗದಿಂದ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುವುದು ಅಷ್ಟೇ ಸತ್ಯ ಎಂದರು.

ಒಂದು ವೇಳೆ ಅಧಿಕಾರ ಹಂಚಿಕೆಯಾದರೆ ನಾನು ಕೂಡ ಸಿಎಂ ಸ್ಥಾನದ ಆಕಾಂಕ್ಷಿ ರೇಸ್‌ನಲ್ಲಿ ಇರುತ್ತೇನೆ ಎಂಬ ಸಂದೇಶವನ್ನು ತಮ್ಮ ಆಪ್ತ ಶಾಸಕರ ಮೂಲಕ ಸತೀಶ್ ಜಾರಕಿಹೊಳಿ ರವಾನೆ ಮಾಡಿದ್ದಾರೆ ಎನ್ನುವ ಗುಸುಗುಸು ಚರ್ಚೆಗಳು ನಡೆದಿವೆ.

ಈ ವಿಡಿಯೋ ನೋಡಿಗೂಗಲ್ ಮತ್ತು ಯುಟ್ಯೂಬ್ ಹ್ಯಾಕ್ ಆಗದಂತೆ ಎಚ್ಚರಿಕೆ ವಹಿಸೋದು ಹೇಗೆ? – ಡಾ. ಎನ್. ಬಿ. ಶ್ರೀಧರ್ Janashakthi Media

 

Donate Janashakthi Media

Leave a Reply

Your email address will not be published. Required fields are marked *