ಜಾತಿ ದಮನ ವಿರೋಧಿಸಿ, ದಲಿತರ ಹಕ್ಕುಗಳಿಗಾಗಿ ಒತ್ತಾಯಿಸಿ ರಾಜ್ಯ ಮಟ್ಟದ ಸಮಾವೇಶ

ಬೆಂಗಳೂರು; ಜ, 06 : ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘವು ಇದೇ ಜನವರಿ 7 ರಂದು ಜಾತಿ ದಮನ ವಿರೋಧಿಸಿ ಹಾಗೂ ದಲಿತರ ಹಕ್ಕುಗಳಿಗಾಗಿ ರಾಜ್ಯ ಮಟ್ಟದ ಸಮಾವೇಶವನ್ನು ಹಮ್ಮಿಕೊಂಡಿದೆ.

ಈ ಸಮಾವೇಶವು ಗುರುವಾರ ಬೆಳಿಗ್ಗೆ 11-30 ಕ್ಕೆ, ಮಹಾರಾಣಿ ಕಾಲೇಜ್ ಹತ್ತಿರ, ಅರಮನೆ ರಸ್ತೆಯಲ್ಲಿರುವ ಶ್ರೀ ಬಸಪ್ಪ ಕೊಂಡಜಿ ಸಭಾಂಗಣ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ಭವನದಲ್ಲಿ ಆರಂಭವಾಗಲಿದ್ದು ರಾಜ್ಯ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನದಾಸ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಲಿದ್ದಾರೆ.

ಸಮಾವೇಶದ ಅಧ್ಯಕ್ಷತೆಯನ್ನುಕರ್ನಾಟಕ ಪ್ರಾಂತ ಕೃಷಿ ಕೂಲಿಕೂಲಿಕಾರರ ಸಂಘದ ರಾಜ್ಯ ಅಧ್ಯಕ್ಷರಾದ ನಿತ್ಯಾನಂದಸ್ವಾಮಿರವರು ವಹಿಸಿಕೊಳ್ಳಲಿದ್ದಾರೆ.

ಈ ಸಮಾವೇಶದಲ್ಲಿ ಅಖಿಲ ಭಾರತ ಕೃಷಿ ಕೂಲಿಕಾರರ ಸಂಘದ ಪ್ರಧಾನ ಕಾರ್ಯದರ್ಶಿ ಬಿ. ವೆಂಕಟ್ ನವದೆಹಲಿ, ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಮಾಳಮ್ಮರವರು ಹಾಗೂ ದಲಿತ ಹಕ್ಕುಗಳ ಸಮಿತಿ ರಾಜ್ಯ ಸಂಚಾಲಕರಾದ ಗೋಪಾಲಕೃಷ್ಣ ಅರಳಹಳ್ಳಿ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *