ಮಹಿಳೆಯ ವಿರುದ್ಧ ದೂರು ದಾಖಲಿಸಿದ ಜೆಡಿಎಸ್

ಬೆಂಗಳೂರು: ಜೆಡಿಎಸ್‌ ಕಾನೂನು ಘಟಕ ಮಹಿಳೆಯ ವಿರುದ್ಧ ಪೊಲೀಸ್‌ ಠಾಣೆಗೆ ದೂರಿದೆ, ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಪರವಾಗಿ ಹಾಗೂ ಮಾಜಿ ಸಿಎಂ, ಹಾಲಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಮಹಿಳೆಯೊಬ್ಬರ ವಿರುದ್ಧ ಜೆಡಿಎಸ್‌ ಪೊಲೀಸ್‌ ಠಾಣೆಗೆ ದೂರು ನೀಡಿದೆ.

ಈ ಬಗ್ಗೆ ದೂರು ನೀಡಿರುವ ಜೆಡಿಎಸ್‌, ಕುಮಾರಸ್ವಾಮಿ ಕುರಿತು ಅತ್ಯಂತ ಕೀಳು ಭಾಷೆಯಲ್ಲಿ ಅವಾಚ್ಯ ಶಬ್ದಗಳಿಂದ ಮಹಿಳೆಯೊಬ್ಬರು ಬೈದಿದ್ದಾರೆ. ಸದರಿ ಮಹಿಳೆ ದುರುದ್ಧೇಶ ಪೂರ್ವಕವಾಗಿ ಕುಮಾರಸ್ವಾಮಿ ಅವರನ್ನು ಅವಮಾನ ಮಾಡುವ ದೃಷ್ಟಿಯಿಂದಲೇ ಬೈದಿರುತ್ತಾಳೆ. ಕುಮಾರಸ್ವಾಮಿ ಅವರಿಗೂ ದರ್ಶನ್‌ ಪ್ರಕರಣಕ್ಕೂ ಯಾವುದೇ ಸಬಂಧವಿರುವುದಿಲ್ಲ.

ಇದನ್ನೂ ಓದಿ: 3133 ಟನ್ ಕುಸುಬೆ ಬೆಳೆ ಬೆಂಬಲ ಬೆಲೆಗೆ ಖರೀದಿಸಲು ಕೇಂದ್ರ ಒಪ್ಪಿಗೆ: ವಿಶೇಷ ಪ್ರತಿನಿಧಿ ಟಿಬಿ ಜಯಚಂದ್ರ

ಆದರೂ ಅನಾವಶ್ಯಕವಾಗಿ ದರ್ಶನ್‌ ಪ್ರಕರಣದಲ್ಲಿ ಕುಮಾರಸ್ವಾಮಿ ಹೆಸರನ್ನು ಎಳೆದು ತಂದು ಸಾಮಾಜಿಕ ಜಾಲತಾಣದಲ್ಲಿ ಬಾಯಿಗೆ ಬಂದಂತೆ ಬೈದು ಅವಮಾನ ಮಾಡಿರುವುದು ಜೆಡಿಎಸ್‌ ಕಾರ್ಯಕರ್ತರಿಗೆ, ಮುಖಂಡರಿಗೆ, ನಾಯಕರಿಗೆ ಬಹಳ ನೋವಾಗಿದೆ.

ಈ ವೀಡಿಯೋ ವೈರಲ್‌ ಆಗಿದ್ದು, ಪಕ್ಷದ ಎಲ್ಲಾ ಕಾರ್ಯಕರ್ತರಿಗೂ ಅವಮಾನವಾಗಿದೆ. ಆದ್ದರಿಂದ ಈ ರೀತಿ ನಿಂದಿಸಿದ ಮಹಿಳೆ ಮಂಗಳ ಹಾಗೂ ಅವರಿಗೆ ಸಂಬಂಧಿಸಿದ ಸಾಮಾಜಿಕ ಜಾಲತಾಣದ ಖಾತೆಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಇದನ್ನೂ ನೋಡಿ: ಲೋಕಸಭೆಯಲ್ಲಿ ರೈತರ ಎರಡು ಗಟ್ಟಿ ದನಿಗಳುJanashakthi Media

Donate Janashakthi Media

Leave a Reply

Your email address will not be published. Required fields are marked *