ಜೆಡಿಎಸ್ ಯಾರನ್ನೂ ರಕ್ಷಣೆ ಮಾಡುತ್ತಿಲ್ಲ: ನಿಖಿಲ್ ಕುಮಾರಸ್ವಾಮಿ

ಮಂಡ್ಯ: ಜೆಡಿಎಸ್ ಯಾರನ್ನೂ ರಕ್ಷಣೆ ಮಾಡುತ್ತಿಲ್ಲ, ಪ್ರಕರಣ ಬೆಳಕಿಗೆ ಬಂದ ದಿನವೇ ಹಾಸನದ ಸಂಸದರನ್ನು ಪಕ್ಷದ ರಾಜ್ಯಾಧ್ಯಕ್ಷರಾದ ಕುಮಾರಸ್ವಾಮಿಯವರು ಉಪ್ಪು ತಿಂದವನು ನೀರು ಕುಡಿಯಲೇ ಬೇಕು  ಎಂದಲೇ  ಪಕ್ಷದಿಂದ ಉಚ್ಛಾಟಿಸಿದ್ದಾರೆ, ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ನಗರದಲ್ಲಿ ಮದುವೆ ಸಮಾರಂಭವೊಂದರಲ್ಲಿ ಭಾಗಿಯಾಗಿದ್ದ ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆ ವಿನಾಕಾರಣ ವಿಳಂಬಗೊಳ್ಳುತ್ತಿದೆ, ಪ್ರಕರಣದ ಸತ್ಯಾಸತ್ಯತೆ ಅರಿಯಲು ಜನ ತವಕಗೊಂಡಿದ್ದಾರೆ, ಕಳೆದ 15 ದಿನಗಳಿಂದ ಮೊಬೈಲ್, ಟಿವಿ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಬರೀ ಇದೇ ವಿಚಾರ ನೋಡಸಿಗುತ್ತಿದೆ ಆದರೆ ತನಿಖೆಯ ವೇಗ ಮಾತ್ರ ಹೆಚ್ಚಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರೀ ಮಳೆಯಿಂದ ರಾತ್ರಿ ವೇಳೆ ನೀರು ನಿಂತು ಟ್ರಾಫಿಕ್ ಜಾಮ್

ಇದೇ ಕಾರಣಕ್ಕೆ ಜೆಡಿಎಸ್ ನಾಯಕರು ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಹೇಳುತ್ತಿದ್ದಾರೆ.  ಸಂತ್ರಸ್ತೆಯರ ಬಗ್ಗೆ ಯಾರೂ ಯೋಚನೆ ಮಾಡುತ್ತಿಲ್ಲ, ಪೆನ್ ಡ್ರೈವ್ ಗಳನ್ನು ಹಂಚಿದ್ಯಾರು ಅಂತ ಜನಕ್ಕೆ ಗೊತ್ತಾಗಬೇಕಿದೆ, ಹಂಚಿದವರು ಮಹಿಳೆಯರ ಮುಖವನ್ನೂ ಬ್ಲರ್ ಮಾಡಿಲ್ಲ, ಈ ಆಯಾಮದಲ್ಲಿ ತನಿಖೆ ಮಾಡುವುದು ಎಸ್ಐಟಿಗೆ ಸಾಧ್ಯವಾಗುತ್ತಿಲ್ಲವಾದರೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲಿ ಎಂದು ನಾವು ಒತ್ತಾಯಿಸುತ್ತಿದ್ದೇವೆ  ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ಇದನ್ನೂ ನೋಡಿ: ಪೆನ್‌ಡ್ರೈವ್‌ ಲೈಂಗಿಕ ಹಗರಣ : ಕಾಂಗ್ರೆಸ್ ಪತ್ರಿಕಾ ಗೋಷ್ಟಿ

Donate Janashakthi Media

Leave a Reply

Your email address will not be published. Required fields are marked *