ಕ್ಷೇತ್ರವಾರು ಅನುದಾನ ಬಿಡುಗಡೆಗಾಗಿ ಸದನದ ಬಾವಿಗಿಳಿದು ಜೆಡಿಎಸ್‌ ಸದಸ್ಯರು ಧರಣಿ

ಬೆಂಗಳೂರು : ರಾಜ್ಯ ವಿಧಾನಸಭೆಯಲ್ಲಿ ಬಜೆಟ್‌ ಅಧಿವೇಶನದಲ್ಲಿ ಇಂದು ಬೆಳಿಗ್ಗೆ ಸದನ ಆರಂಭವಾಗುತ್ತಿದ್ದಂತೆ ಪ್ರಶ್ನೋತ್ತರ ವೇಳೆಯಲ್ಲಿ ಜನತಾದಳ (ಜಾತ್ಯಾತೀತ)-ಜೆಡಿಎಸ್‌ ಪಕ್ಷದ ಚಿಂತಾಮಣಿ ಶಾಸಕ ಕೃಷ್ಣಾರೆಡ್ಡಿರವರು ಬಜೆಟ್‌ ಮೇಲೆ ಚರ್ಚಿಸುತ್ತಾ, ವಿಧಾನಸಭಾ ಕ್ಷೇತ್ರವಾರು ಶಾಸಕರ ಕೋಟಾದಡಿ ಅನುದಾನ ಬಿಡುಗಡೆಯಾಗಿಲ್ಲ. ಕಳೆದ ಎರಡೂ ವರ್ಷದಿಂದ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದ ಕಾಮಗಾರಿಗಳಿಗಾಗಿ ಅನುದಾನ ಬಿಡುಗಡೆಯಾಗಿಲ್ಲ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಉಪಮುಖ್ಯಮಂತ್ರಿ ಗೋವಿಂದ ಕಾರಚೋಳರವರ ಈಗಾಗಲೇ ಎರಡು ಕಾಮಗಾರಿಗಳಿಗೆ ಸಂಬಂಧಿಸಿದಂತೆ ಅನುದಾನ ಬಿಡುಗಡೆಯಾಗಿದೆ. ಉಳಿದ ಕಾಮಗಾರಿಗಳಿಗೂ ಹಣಕಾಸು ಬಿಡುಗಡೆ ಬಗ್ಗೆ ಪರಿಶೀಲಿಸಿ ಬಿಡುಗಡೆಗೊಳಿಸಲಾಗುವುದು ಎಂದು ಉತ್ತರಿಸಿದರು.

ಉಪಮುಖ್ಯಮಂತ್ರಿಗಳ ಉತ್ತರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಕೃಷ್ಣಾರೆಡ್ಡಿರವರು ಸದನದ ಬಾವಿಗಿಳಿದ ಪ್ರತಿಭಟನೆ ನಡೆಸಿದರು. ಇದುವರೆಗೂ ಅನುದಾನ ಬಿಡುಗಡೆಯಾಗಿಲ್ಲ ಎಂದು ಜೆಡಿಎಸ್‌ ಪಕ್ಷದ ಶಾಸಕರು ಸಹ ಜೊತೆ ಗೂಡಿದರು.

Donate Janashakthi Media

Leave a Reply

Your email address will not be published. Required fields are marked *