ತಾನು ರಕ್ಷಿಸಿದ ನಾಯಿಯಿಂದ ಕಚ್ಚಿಸಿಕೊಂಡು ಕಬಡ್ಡಿ ಆಟಗಾರ ಸಾವು

ಉತ್ತರ ಪ್ರದೇಶ: ರಾಜ್ಯದ ಬುಲಂದ್​ಶಹರ್​​ನಲ್ಲಿ ತಾನು ರಕ್ಷಿಸಿದ ನಾಯಿಯಿಂದಲೇ ಕಚ್ಚಿಸಿಕೊಂಡು ಕಬಡ್ಡಿ ಆಟಗಾರರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.

ನಾಯಿ ಕಡಿತದಿಂದ ರಾಜ್ಯ ಮಟ್ಟದ ಕಬಡ್ಡಿ ಆಟಗಾರ ಬ್ರಿಜೇಶ್ ಸೋಲಂಕಿ ಸಾವನ್ನಪ್ಪಿದ್ದಾರೆ. ಬ್ರಿಜೇಶ್ ಬೀದಿ ನಾಯಿಯೊಂದನ್ನು ರಕ್ಷಿಸಿದ್ದರು.

ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ: ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು

ಆ ನಾಯಿ ಅವರಿಗೆ ಕಚ್ಚಿತ್ತು. ಈ ಬಗ್ಗೆ ಅಷ್ಟಾಗಿ ತಲೆ ಕೆಡಿಸಿಕೊಂಡಿರಲಿಲ್ಲ. ಆದರೆ ರೇಬಿಸ್ ರೋಗಕ್ಕೆ ತುತ್ತಾಗಿ ಪ್ರಾಣಬಿಟ್ಟಿದ್ದಾರೆ. ಕೊನೆಯ ಕ್ಷಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಾರ್ಚ್​​ನಲ್ಲಿ ನಾಯಿಯೊಂದು ಚರಂಡಿಗೆ ಬಿದ್ದಿತ್ತು. ಅದನ್ನು ರಕ್ಷಿಸುವ ಸಮಯದಲ್ಲಿ ಬಲಗೈಗೆ ಕಚ್ಚಿತ್ತು. ಅದನ್ನು ಸಣ್ಣ ಗಾಯವೆಂದು ಭಾವಿಸಿ, ನಿರ್ಲಕ್ಷಿಸಿದ್ದರು. ರೇಬಿಸ್ ಲಸಿಕೆಯನ್ನೂ ಪಡೆದಿರಲಿಲ್ಲ. ಕೊನೆಗೆ ಪ್ರಾಣಕ್ಕೆ ಮುಳುವಾಗಿದೆ. ರೇಬಿಸ್​ ರೋಗಕ್ಕೆ ತುತ್ತಾಗಿ ಹಾಸಿಗೆಯ ಮೇಲೆ ಮಲಗಿ ನೋವಿನಿಂದ ಒದ್ದಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಇದನ್ನೂ ನೋಡಿ: LIVE | ಬಲವಂತದ ಭೂ ಸ್ವಾಧೀನ ವಿರೋಧಿಸಿ ಭೂಮಿ ಸತ್ಯಾಗ್ರಹ | ಪತ್ರಿಕಾಗೋಷ್ಠಿ

Donate Janashakthi Media

Leave a Reply

Your email address will not be published. Required fields are marked *