ರಜನಿಕಾಂತ್ ಅಭಿನಯದ ʻಕಬಾಲಿʼ ಚಿತ್ರವನ್ನು ನಿರ್ಮಿಸಿದ್ದ, ತೆಲುಗು ಚಲನಚಿತ್ರ ನಿರ್ಮಾಪಕ ಕೆಪಿ ಚೌಧರಿ (44) ಸೋಮವಾರ ಗೋವಾದ ಹಳ್ಳಿಯೊಂದರ ಬಾಡಿಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಪೊಲೀಸರು ಆತ್ಮಹತ್ಯೆ ಎಂದು ಖಚಿತಪಡಿಸಿದ್ದಾರೆ.ಮೃತದೇಹವು ಸಿಯೋಲಿಮ್ ಗ್ರಾಮದ ಬಾಡಿಗೆ ಆವರಣದಲ್ಲಿ ಪತ್ತೆಯಾಗಿದೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದ್ದು, ನಂತರ ಮಾಹಿತಿ ಹಂಚಿಕೊಳ್ಳುತ್ತೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದರು.
ರಜನಿಕಾಂತ್ ಅಭಿನಯದ ʻಕಬಾಲಿʼ ಚಿತ್ರವನ್ನು ನಿರ್ಮಿಸಿ ಯಶ್ವಿಯಾಗಿದ್ದ ಚೌಧರಿ ಅವರನ್ನ 2023ರಲ್ಲಿ ಸೈಬರಾಬಾದ್ ವಿಶೇಷ ಕಾರ್ಯಾಚರಣೆ ತಂಡವು ಡ್ರಗ್ಸ್ ಕೇಸ್ನಲ್ಲಿ ಬಂಧಿಸಿದ್ದರು.