ಕನ್ನಡ ಕಿರುತೆರೆ ನಟ ಶ್ರೀಧರ್ ನಾಯಕ್ ನಿಧನ

ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಲನಚಿತ್ರ ನಟ, 47 ವರ್ಷದ ಶ್ರೀಧರ್ ನಾಯಕ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದೂ, ಚಿಕಿತ್ಸೆ ಫಲಕಾರಿ ಆಗದೆ ಮೇ 26 ಸೋಮವಾರದಂದು ನಿಧನರಾಗಿದ್ದಾರೆ.

ಬೆಂಗಳೂರಿನ ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅವರ ಕಳೆಬರಹವನ್ನು ಇಡಲಾಗಿದೆ.

ಇದನ್ನೂ ಓದಿ: ಮೇ 28 ರವರೆಗೆ ಕರ್ನಾಟಕದಲ್ಲಿ ಬಿರುಗಾಳಿ ಸಹಿತ ವ್ಯಾಪಕ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ

ಶ್ರೀಧರ್ ‘ಪಾರು’ ಮತ್ತು ‘ವಧು’ ಧಾರಾವಾಹಿಗಳಲ್ಲಿ ಪಾತ್ರಗಳು ಜನಪ್ರಿಯವಾಗಿದ್ದವು. ‘ಮ್ಯಾಕ್ಸ್’ ಚಿತ್ರದಲ್ಲೂ ಅವರು ನಟಿಸಿದ್ದರು. ಅವರ ಅಕಾಲಿಕ ನಿಧನವು ಅಭಿಮಾನಿಗಳಿಗೆ ಆಘಾತವನ್ನುಂಟು ಮಾಡಿದೆ.

ಇತ್ತೀಚೆಗೆ ಶ್ರೀಧರ್ ಅನಾರೋಗ್ಯ, ಆರ್ಥಿಕ ಪರಿಸ್ಥಿತಿ ಹದಗೆಟ್ಟಿತ್ತು. ಹೀಗಾಗಿ, ಅವರು ಸಹಾಯ ಕೋರಿದ್ದರು. ಅನೇಕರು ಹಣದ ಸಹಾಯ ಕೂಡ ಮಾಡಿದ್ದರು. ಆದರೆ, ಚಿಕಿತ್ಸೆ ಫಲಕಾರಿ ಆಗಲಿಲ್ಲ. ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ನೋಡಿ: ಫ್ಯಾಸಿಸಂ ವಿರುದ್ಧ ವಿಜಯದ 80 ವರ್ಷಗಳ ನಂತರ ಈಗ ಅದನ್ನು ಯಾಕೆ ನೆನಪಿಸಿಕೊಳ್ಳಬೇಕು ?

Donate Janashakthi Media

Leave a Reply

Your email address will not be published. Required fields are marked *