ಅತ್ಯಾಚಾರ ಪ್ರಕರಣ : ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ಪ್ರಜ್ವಲ್ ರೇವಣ್ಣ

ಬೆಂಗಳೂರು: ಹಲವು ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿರುವ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ರನ್ನು ಜುಲೈ 8ರವರೆಗೆ ನ್ಯಾಯಾಂಗ ಬಂಧನನದಲ್ಲಿರುವಂತೆ ನ್ಯಾಯಾಲಯ ಆದೇಶಿಸಿದೆ.

ಅವರ ನಾಲ್ಕು ದಿನಗಳ ವಿಶೇಷ ತನಿಖಾ ತಂಡದ (ಎಸ್‌ಐಟಿ) ಕಸ್ಟಡಿ ಶನಿವರ ಅಂತ್ಯಗೊಂಡ ನಂತರ ಅವರನ್ನು 42 ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.

ಇದನ್ನೂ ಓದಿ: ಮತ್ತೊಂದು ವಿಮಾನ‌ ನಿಲ್ದಾಣದ‌‌ ಮೇಲ್ಛಾವಣಿ‌ ಕುಸಿತ

ಪ್ರಜ್ವಲ್ ರೇವಣ್ಣ ರನ್ನು ಜುಲೈ 8 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪೊಲೀಸರು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (ಎಸ್‌ಪಿಪಿ) ಮೂಲಕ ಬಾಡಿ ವಾರೆಂಟ್ ಕೋರಿದ ನಂತರ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ನ್ಯಾಯಾಧೀಶರು ಅವರನ್ನು ಜೂನ್ 29 ರವರೆಗೆ ಎಸ್‌ಐಟಿ ಕಸ್ಟಡಿಗೆ ಕಳುಹಿಸಿದ್ದರು.

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಹಾಸನ ಕ್ಷೇತ್ರವನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ಪ್ರಜ್ವಲ್ ವಿಫಲರಾಗಿದ್ದರು. ಏಪ್ರಿಲ್ 26 ರಂದು ಲೋಕಸಭೆ ಚುನಾವಣೆಗೆ ಮುನ್ನ ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಭಾಗಿಯಾಗಿದ್ದಾರೆ ಎನ್ನಲಾದ ಸ್ಪಷ್ಟ ವೀಡಿಯೊಗಳನ್ನು ಒಳಗೊಂಡಿರುವ ಪೆನ್-ಡ್ರೈವ್‌ಗಳನ್ನು ಪ್ರಸಾರ ಮಾಡಿದ ನಂತರ ಲೈಂಗಿಕ ದೌರ್ಜನ್ಯ ಪ್ರಕರಣಗಳು ಬೆಳಕಿಗೆ ಬಂದಿವೆ.

ಪ್ರಜ್ವಲ್‌ ರೇವಣ್ಣ ನ ವಿರುದ್ಧ ಪ್ರಕರಣಗಳು ದಾಖಲಾದ ಹಿನ್ನೆಲೆಯಲ್ಲಿ ಜೆಡಿಎಸ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿತ್ತು.

ಇದನ್ನೂ ನೋಡಿ: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮೇಲಿರುವ ಗುರುತರ ಜವಬ್ದಾರಿಗಳೇನು? Janashakthi Media

Donate Janashakthi Media

Leave a Reply

Your email address will not be published. Required fields are marked *