ಕೇಂದ್ರ ಸಚಿವ ಪುತ್ರ ಆಶಿಶ್ ಮಿಶ್ರಾ ಮೂರು ದಿನ ಪೊಲೀಸರ ವಶಕ್ಕೆ

ಲಖನೌ: ಲಖಿಂಪುರ ಖೇರಿ ಹಿಂಸಾಚಾರದ ಪ್ರಮುಖ ಆರೋಪಿ ಹಾಗೂ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾಗೆ ಷರತ್ತಿನೊಂದಿಗೆ ಮೂರು ದಿನಗಳ ಪೊಲೀಸರ ವಶಕ್ಕೆ ಕಳುಹಿಸಲಾಗಿದೆ ಎಂದು ಪ್ರಾಸಿಕ್ಯೂಷನ್ ವಕೀಲ ಎಸ್ ಪಿ ಯಾದವ್ ಇಂದು ಹೇಳಿಕೆ ನೀಡಿದ್ದಾರೆ.

ಶನಿವಾರ ತಡರಾತ್ರಿ ಆಶಿಶ್ ಮಿಶ್ರಾನನ್ನು ಬಂಧಿಸಿದ ನಂತರ ಸ್ಥಳೀಯ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಇಂದು  ಆಶಿಶ್ ಮಿಶ್ರಾ ಪೋಲಿಸರ ವಶಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆ  ನಡೆಯಿತು.

ಅಕ್ಟೋಬರ್‌ 03ರಂದು ಲಖಿಂಪುರ ಖೇರ್ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರ ಹತ್ಯೆಗೆ ಸಂಬಂಧಿಸಿದಂತೆ ಕಳೆದ ಶನಿವಾರ ಸುಮಾರು 12 ಗಂಟೆಗಳ ಕಾಲ ಆಶಿಶ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದರು.

ಲಖಿಂಪುರ ಖೇರಿಯ ಅಪರಾಧ ವಿಭಾಗದ ಕಚೇರಿಯಲ್ಲಿ ವೈದ್ಯಕೀಯ ತಂಡವೊಂದು ಆಶಿಶ್ ಮಿಶ್ರಾ ಅವರನ್ನು ಪರೀಕ್ಷಿಸಿದ ನಂತರ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಆತನನ್ನು ಕಸ್ಟಡಿಗೆ ನೀಡಿದೆ ಎಂದು ಪ್ರಾಸಿಕ್ಯೂಷನ್ ವಕೀಲ ಯಾದವ್ ತಿಳಿಸಿದ್ದಾರೆ.

ಎಸ್‌ಐಟಿ ವಿಚಾರಣೆ ನಡೆಸುವಾಗಲೆಲ್ಲ ಆಶಿಶ್ ಮಿಶ್ರಾ ವೈದ್ಯಕೀಯ ತಪಾಸಣೆ ನಡೆಸಬೇಕು, ವಿಚಾರಣೆ ವೇಳೆಯಲ್ಲಿ ಪೊಲೀಸರು ಕಿರುಕುಳ ನೀಡಬಾರದು, ವಿಚಾರಣೆ ವೇಳೆಯಲ್ಲಿ ದೂರದಿಂದಲೇ ಆತನನ್ನು ವೀಕ್ಷಿಸಲು ವಕೀಲರಿಗೆ ಅನುಮತಿ ಸೇರಿದಂತೆ ಮೂರು ಷರತ್ತುಗಳನ್ನು ನ್ಯಾಯಾಲಯ ವಿಧಿಸಿದೆ.

Donate Janashakthi Media

Leave a Reply

Your email address will not be published. Required fields are marked *