ಗುಡ್ಡ ಕುಸಿತ ಸ್ಥಳದಲ್ಲಿ ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ

ಅಂಕೋಲಾ: ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಸ್ಥಳದಲ್ಲಿ ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಮೂರನೇ ಹಂತದ ಕಾರ್ಯಾಚರಣೆ ನಡೆಯುತ್ತಿರುವ ಸಂದರ್ಭದಲ್ಲಿ ಶನಿವಾರ ಮಧ್ಯಾಹ್ನ (ಸೆ.21) ಪತ್ತೆಯಾಗಿದೆ. ಮುಳುಗು ತಜ್ಞ ಈಶ್ವರ ಮಲ್ಪೆ ಕಾರ್ಯಾಚರಣೆ ನಡೆಸುತ್ತಿರುವ ಸಂದರ್ಭದಲ್ಲಿ ಲಾರಿ ಚಕ್ರ ಕಂಡು ಬಂದಿದೆ.

ಗುಡ್ಡ ಕುಸಿತದ ಕಾರಣದಿಂದ ಹೆದ್ದಾರಿ ಬದಲಿಯಲ್ಲಿದ್ದ ಹೋಟೆಲ್ ಸಮೇತ ಲಾರಿಯೂ ಗಂಗಾವಳಿ ನದಿ ಪಾಲಾಗಿತ್ತು. ಎನ್‌ಡಿಆರ್‌ಎಫ್ ತಂಡ ಡೋನ್ ಮೂಲಕ ಸ್ಕ್ಯಾನಿಂಗ್‌ ನಡೆಸಿದ್ದು, ನದಿಯಲ್ಲಿ ಸ್ಕ್ಯಾನಿಂಗ್ ಮೂಲಕ ಲಾರಿ ಇರುವ ಸ್ಥಳ ಗುರುತು ಮಾಡಿತ್ತು. ಆದರೆ ಡ್ರೈವಿಂಗ್ ಮಾಡಿ ಲಾರಿಯನ್ನು ಪರಿಶೀಲಿಸಲು ನದಿಯ ಹರಿವು ಅಡ್ಡಿಯಾಗಿತ್ತು.

ಇದನ್ನು ಓದಿ : ಒಂದೇ ಸೆಕೆಂಡಿನಲ್ಲಿ ಮಾಯವಾದ ಪುಣೆ ಕಾರ್ಪೋರೇಶನ್ ನೀರಿನ ಟ್ರಕ್!

ಲಾರಿ ತಲೆ ಕೆಳಗಾದ ಸ್ಥಿತಿಯಲ್ಲಿ ನೀರಿನಲ್ಲಿ ಮುಳುಗಿದ್ದು, ಲಾರಿ ಚಕ್ರಕ್ಕೆ ಈಶ್ವರ ಮಲ್ಪೆ ಹಗ್ಗ ಕಟ್ಟಿ ಬಂದಿದ್ದಾರೆ.

ಜುಲೈ 16ರಂದು ನಡೆದಿದ್ದ ಗುಡ್ಡ ಕುಸಿತ ದುರಂತದಲ್ಲಿ ಕೇರಳ ಮೂಲದ ಲಾರಿ ನಾಪತ್ತೆಯಾಗಿತ್ತು. ಲಾರಿಯಲ್ಲಿದ್ದ ಚಾಲಕ ಅರ್ಜುನ ಸಹ ನಾಪತ್ತೆಯಾಗಿದ್ದರು. ಆ ವೇಳೆ ಹಲವು ತಂಡಗಳಿಂದ ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ ತೀವ್ರ ನೀರಿನ ಸೆಳೆತದ ಕಾರಣದಿಂದ ಅಡ್ಡಿಯಾಗಿತ್ತು.

ಇದನ್ನು ನೋಡಿ : ಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತ – ವೈದ್ಯರು ಹೇಳುವುದೇನು?Janashakthi Media

Donate Janashakthi Media

Leave a Reply

Your email address will not be published. Required fields are marked *