ಮಹಾ ಕುಂಭಮೇಳ ಕಾಲ್ತುಳಿತದಲ್ಲಿ ಸಾವಿನ ಸಂಖ್ಯೆ ಎಷ್ಟಾಗಿದೆ, ವರದಿ ಬಿಡುಗಡೆ ಮಾಡಲಿ – ಖರ್ಗೆ ಕಿಡಿ

ನವದೆಹಲಿ :  ಮಹಾ ಕುಂಭಮೇಳದಲ್ಲಿ ಉಂಟಾದ ಕಾಲ್ತುಳಿತದಲ್ಲಿ 1,000 ಜನ ಪ್ರಾಣ ಎಂದು ನಾನು ಹೇಳಿದ್ದೇನೆ. ಒಂದು ವೇಳೆ ನಾನು ಹೇಳಿದ್ದು ತಪ್ಪು ಎನ್ನುವುದಾದರೆ, ಸಾವಿನ ಸಂಖ್ಯೆಯ ನಿಖರವಾದ ವರದಿಯನ್ನು ಬಿಡುಗಡೆ ಮಾಡಲಿ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಜನವರಿ 29ರಂದು ಮಹಾ ಕುಂಭಮೇಳದ ಕಾಲ್ತುಳಿತದಲ್ಲಿ ಮಡಿದ `ಸಾವಿರಾರು` ಜನರಿಗೆ ಶ್ರದ್ಧಾಂಜಲಿ ಸಲ್ಲಿಸುವುದಾಗಿ ತಿಳಿಸಿದ್ರು. ಈ ವೇಳೆ ಸಭಾಪತಿ ಜಗದೀಪ್ ಧನಕರ್ (ಜಗ್ದೀಪ್ ಧನಕರ್) ಅವರು ಹೇಳಿಕೆಯನ್ನು ಹಿಂತೆಗೆದುಕೊಳ್ಳುವಂತೆ ಹೇಳಿದರು. ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಅವರು ಮಾತನಾಡಿದರು.

ಇದನ್ನೂ ಓದಿ : ‘ಉಪ್ಪಿಟ್ಟು ಬೇಡ.. ಬಿರಿಯಾನಿ, ಚಿಕನ್ ಫ್ರೈ ಬೇಕು’: ಅಂಗನವಾಡಿ ಬಾಲಕನ ಬೇಡಿಕೆಗೆ ಸ್ಪಂದಿಸಿದ ಎಡರಂಗ ಸರ್ಕಾರ

ಬಳಿಕ ಮಾತು ಮುಂದುವರಿಸಿದ ಖರ್ಗೆ ಅವರು, ಮಹಾಕುಂಭದಲ್ಲಿ ನಡೆದ ಕಾಲ್ತುಳಿತದ ಬಗ್ಗೆ ನಾನು ಮಾತನಾಡಲು ಬಯಸುತ್ತೇನೆ. ತುಂಬಾ ಜನರು ಅಲ್ಲಿ ಪ್ರಾಣ ಕಳೆದುಕೊಂಡರು. ನಾನು ಅಲ್ಲಿ 1 ಸಾವಿರ ಜನರು ಸಾವನ್ನಪ್ಪಿದ್ದಾರೆ ಎಂದು ನಾನು ಹೇಳಿದ್ದೇನೆ. ನಾನು ಹೇಳಿದ್ದು ತಪ್ಪು ಎನ್ನುವುದಾದರೆ ಕನಿಷ್ಠ ಅಲ್ಲಿ ಆಗಿರುವ ಸಾವುಗಳ ಸಂಖ್ಯೆ ನಿಖರವಾದ ವರದಿ ಕೊಡಿ ಎಂದು ಹೇಳಿದರು.

ಖರ್ಗೆ ಹೇಳಿಕೆಗೆ ಆಡಳಿತ ಪಕ್ಷ ನಾಯಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಈ ವೇಳೆ ಗದ್ದಲ ಏರ್ಪಟ್ಟಿತು.

Donate Janashakthi Media

Leave a Reply

Your email address will not be published. Required fields are marked *