ಕೋಲ್ಕತ್ತಾ ಕಾನೂನು ಕಾಲೇಜು ಅತ್ಯಾಚಾರ ಪ್ರಕರಣ: ಆರೋಪಪಟ್ಟಿ ಬಿಡುಗಡೆ

ವದೆಹಲಿ: ಕೋಲ್ಕತ್ತಾ ಕಾನೂನು ಕಾಲೇಜಿನಲ್ಲಿ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಆರೋಪಪಟ್ಟಿ ತಯಾರಿಸಿದ್ದು, ಇದರಲ್ಲಿ ಅತ್ಯಾಚಾರ ಮಾಡಿ ಅಶ್ಲೀಲ ವಿಡಿಯೋ ಚಿತ್ರೀಕರಿಸಲಾಗಿತ್ತು ಎಂದು ಹೇಳಲಾಗಿದೆ.

ಕೋಲ್ಕತ್ತಾ ಕಾನೂನು ಕಾಲೇಜಿನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿಯು ಸಂತ್ರಸ್ತೆಯ ಹಲವು ವೀಡಿಯೊಗಳನ್ನು ಮಾಡಿ ಅದರ ಮೂಲಕ ಆಕೆಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎಂದು ಪ್ರಕರಣದಲ್ಲಿ ಸಲ್ಲಿಸಲಾದ 650 ಪುಟಗಳ ಆರೋಪಪಟ್ಟಿಯಲ್ಲಿ ಹೇಳಲಾಗಿದೆ.

ಮಹಿಳೆಯ ವೈದ್ಯಕೀಯ ಪರೀಕ್ಷೆಯಲ್ಲಿ ಅತ್ಯಾಚಾರ ದೃಢಪಟ್ಟಿದ್ದು, ಆರೋಪಿಯ ಡಿಎನ್‌ಎ ವಿಧಿವಿಜ್ಞಾನ ಮಾದರಿಗಳಿಗೆ ಹೊಂದಿಕೆಯಾಗಿದೆ ಎಂದು ಪೊಲೀಸರು ಕಂಡುಹಿಡಿದಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಬೆಂಗಳೂರು |ಕೆಸೆಟ್- ಅರ್ಜಿ ಸಲ್ಲಿಸಲು ಸೆ.18 ಕೊನೆಯ ದಿನ

ಕಳೆದ ಜೂನ್ 25 ರಂದು ದಕ್ಷಿಣ ಕೋಲ್ಕತ್ತಾ ಕಾನೂನು ಕಾಲೇಜು ಆವರಣದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿನಿಯನ್ನು ಪ್ರಮುಖ ಆರೋಪಿ ಮತ್ತು ಕಾಲೇಜಿನ ಹಳೆಯ ವಿದ್ಯಾರ್ಥಿ ಮತ್ತು ಸಹ ಆರೋಪಿಗಳಾದ ಜೈಬ್ ಅಹ್ಮದ್ ಮತ್ತು ಪ್ರಮಿತ್ ಮುಖರ್ಜಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು.

ಆರೋಪಪಟ್ಟಿಯಲ್ಲಿ ನಾಲ್ವರು ಆರೋಪಿಗಳ ಹೆಸರು ಉಲ್ಲೇಖಿಸಲಾಗಿದ್ದು, ಈ ಪೈಕಿ ಮೂವರು ಪ್ರಮುಖ ಆರೋಪಿಗಳಾಗಿದ್ದು, ಭದ್ರತಾ ಸಿಬ್ಬಂದಿ ಪಿನಾಕಿ ಬ್ಯಾನರ್ಜಿ ಹೆಸರನ್ನೂ ಕೂಡ ಚಾರ್ಜ್ ಶೀಟ್ ನಲ್ಲಿ ಹೆಸರಿಸಲಾಗಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಯನ್ನು ವಶಪಡಿಸಿಕೊಳ್ಳಲಾಗಿದ್ದು, ಇದರಲ್ಲಿ ಆರೋಪಿಗಳು ಸಂತ್ರಸ್ಥೆಯನ್ನು ಒತ್ತೆಯಾಳಾಗಿ ಹಿಡಿದಿಟ್ಟುಕೊಂಡಿದ್ದರು ಎಂದು ದೃಢಪಟ್ಟಿದೆ.

ಇತರ ಆರೋಪಿಗಳ ಮೊಬೈಲ್ ಫೋನ್‌ಗಳಿಂದ ಬಲಿಪಶುವಿನ ಅನೇಕ ಅಶ್ಲೀಲ ವೀಡಿಯೊಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ವೀಡಿಯೊಗಳನ್ನು ಆರೋಪಿಗಳು ಗೋಡೆಯಲ್ಲಿ ಅಳವಡಿಸಲಾದ ಎಕ್ಸಾಸ್ಟ್ ಫ್ಯಾನ್‌ನ ರಂಧ್ರದ ಮೂಲಕ ಕ್ಯಾಮೆರಾ ಇಟ್ಟು ರೆಕಾರ್ಡ್ ಮಾಡಿದ್ದಾರೆ. ವೀಡಿಯೊಗಳಲ್ಲಿ ಆರೋಪಿಗಳ ಧ್ವನಿಗಳು ಇದ್ದು, ಧ್ವನಿ ಮಾದರಿಗಳು ಹೊಂದಿಕೆಯಾಗುತ್ತವೆ. ಅಪರಾಧ ನಡೆದ ಸ್ಥಳದಲ್ಲಿ ಆರೋಪಿಯ ಮೊಬೈಲ್ ಸ್ಥಳ ಪತ್ತೆಯಾಗಿದೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.

ಭದ್ರತಾ ಸಿಬ್ಬಂದಿ ಕೈವಾಡ

ಘಟನೆಯ ಬಗ್ಗೆ ಪೊಲೀಸರಿಗೆ ಅಥವಾ ಹತ್ತಿರದ ಯಾರಿಗಾದರೂ ತಿಳಿಸುವ ಬದಲು ಭದ್ರತಾ ಸಿಬ್ಬಂದಿ ಗಾರ್ಡ್ ಕೋಣೆಗೆ ಬೀಗ ಹಾಕಿದ್ದಾರೆ ಎಂದು ಆರೋಪಪಟ್ಟಿಯಲ್ಲಿ ಹೇಳಲಾಗಿದೆ. ಪ್ರಕರಣದಲ್ಲಿ ಅವರನ್ನೂ ಆರೋಪಿ ಎಂದೂ ಹೆಸರಿಸಲಾಗಿದೆ.

ಆ ಘಟನೆಗೂ ಮೊದಲು ಮನೋಜಿತ್ ಮಿಶ್ರಾ ಅವರನ್ನು ಎಂಟು ಬಾರಿ ಬಂಧಿಸಲಾಗಿತ್ತು. ಆದರೆ ಅವರ ಸ್ನೇಹಿತರು ಅವರನ್ನು ಜಾಮೀನಿನಲ್ಲಿ ಬಿಡುಗಡೆ ಮಾಡಿದ್ದರು. 2024ರಿಂದ ಕಾಲೇಜಿನಲ್ಲಿ ತಾತ್ಕಾಲಿಕ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ವಜಾಗೊಳಿಸಲಾಗಿತ್ತು. ಸಂಸ್ಥೆಯ ವಿದ್ಯಾರ್ಥಿಗಳಾದ ಅಹ್ಮದ್ ಮತ್ತು ಮುಖರ್ಜಿ ಅವರನ್ನು ಹೊರಹಾಕಲಾಗಿತ್ತು ಎಂದು ಹೇಳಲಾಗಿದೆ.

ಇದನ್ನೂ ನೋಡಿ: ‘ಷಡ್ಯಂತ್ರ’ ಯಾರದ್ದು??ದೂರುದಾರನನ್ನು ಬಂಧಿಸಿದ್ದು‌‌ಯಾಕೆ??? Janashakthi Media

Donate Janashakthi Media

Leave a Reply

Your email address will not be published. Required fields are marked *