ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನ ನನಗೆ ನೀಡುತ್ತಾರೆಂಬ ವಿಚಾರ ಸುಳ್ಳು| ಲಕ್ಷ್ಮಣ್ ಸವದಿ

ಚಿಕ್ಕೋಡಿ: “ನನಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನದ ನೀಡುತ್ತಾರೆಂಬ ವಿಚಾರ ಊಹಾಪೋಹ ಅಷ್ಟೇ. ಈ ಬಗ್ಗೆ ನನಗೆ ಮಾಹಿತಿಯೂ ಇಲ್ಲ” ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಹೇಳಿದರು. ಅಥಣಿ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಅ-20 ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಇದೆಲ್ಲಾ ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ. ನಾನು ತಾಲೂಕಿನ ಅಭಿವೃದ್ಧಿ ವಿಚಾರವಾಗಿ ಸಿಎಂ ಮತ್ತು ಡಿಸಿಎಂ ಭೇಟಿಗೆ ಹೋಗಿದ್ದೆ. ಅವರೊಂದಿಗೆ ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ” ಎಂದರು. ಕಾರ್ಯಾಧ್ಯಕ್ಷ 

ಇದನ್ನೂ ಓದಿ:ಹಾದಿ- ಬೀದಿಯಲ್ಲಿ ಹೋಗುವವರಿಗೆಲ್ಲಾ ಉತ್ತರ ಕೊಡಲು ಆಗುವುದಿಲ್ಲ| ಡಿ.ಕೆ.ಶಿವಕುಮಾರ್

ಪದಾಧಿಕಾರಿಗಳ ಪುನರ್‌ರಚನೆಯನ್ನು ಕೇಂದ್ರದ ವರಿಷ್ಠರು ಹಾಗೂ ರಾಜ್ಯಾಧ್ಯಕ್ಷರು ಸೇರಿ ಮಾಡುವ ಪ್ರಕ್ರಿಯೆ. ಇವತ್ತಿನವರೆಗೂ ಈ ಕುರಿತು ನನ್ನೆದುರಿಗೆ ಯಾರೂ ಚರ್ಚೆ ಮಾಡಿಲ್ಲ ಎಂದು ಹೇಳಿದರು. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು​ ಬೆಳಗಾವಿಗೆ ಆಗಮಿಸಿದ್ದಾಗ ಶಾಸಕರು ಮತ್ತು ಸಚಿವರು ಅವರೊಂದಿಗೆ ಕಾಣಿಸಿಕೊಳ್ಳದ ವಿಚಾರವಾಗಿ ಮಾತನಾಡಿ, “ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು. ಅವರು ಹುಕ್ಕೇರಿ ಧಾರ್ಮಿಕ ಕಾರ್ಯಕ್ರಮಕ್ಕೆ ಬಂದಿದ್ದರು. ಬೆಳಗಾವಿಗೆ ಬರುತ್ತಿರುವ ಕುರಿತು ಶಾಸಕರಿಗೆ ಮತ್ತು ಮಂತ್ರಿಗಳಿಗೆ ಮಾಹಿತಿ ಇರಲಿಲ್ಲ. ಇದರಿಂದ ಕೆಲವು ಶಾಸಕರು ತಮ್ಮ ಕ್ಷೇತ್ರಗಳಲ್ಲಿ ಬ್ಯುಸಿಯಾಗಿದ್ದರು” ಎಂದು ಹೇಳಿದರು.

“ನಾನು ಕೂಡ ಬೆಂಗಳೂರಿನಲ್ಲಿ ಬೇರೆ ಕೆಲಸದ ನಿಮಿತ್ತ ಅಲ್ಲೇ ಉಳಿದಿದ್ದೆ. ಡಿ.ಕೆ.ಶಿವಕುಮಾರ್​ ಅವರು ಭಾಗವಹಿಸಿದ್ದು ಸರ್ಕಾರಿ ಕಾರ್ಯಕ್ರಮವಲ್ಲ. ಈ ವಿಚಾರವನ್ನು ಅಪಾರ್ಥ ಮಾಡಿಕೊಳ್ಳಬಾರದು. ಹುಕ್ಕೇರಿ ಶ್ರೀಗಳು ದಸರಾ ಹಬ್ಬಕ್ಕೆ ಅವರನ್ನು ಆಹ್ವಾನಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳ ಸ್ಥಾನ ವಹಿಸಿದ್ದರು. ಇಲ್ಲಿ ಅವರ ಸ್ವಾಗತಕ್ಕೆ ಅವರು ಹೋಗಿಲ್ಲ, ಇವರು ಹೋಗಿಲ್ಲ ಎಂಬ ಚರ್ಚೆ ಅನಾವಶ್ಯಕ” ಎಂದರು.

ವಿಡಿಯೋ ನೋಡಿ:ಮುಂಬಡ್ತಿ ಗೊಂದಲ ನಿವಾರಣೆಗೆ ಆಗ್ರಹಿಸಿ ಶಿಕ್ಷಕ – ಉಪನ್ಯಾಸಕರ ಪ್ರತಿಭಟನೆ

Donate Janashakthi Media

Leave a Reply

Your email address will not be published. Required fields are marked *