ಕುವೈತ್ ಅಗ್ನಿ ದುರಂತ : ಮೃತ ವಿಜಯ ಕುಮಾರ್ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ – ಮುಖ್ಯಮಂತ್ರಿಗಳ ಸೂಚನೆ

ಬೆಂಗಳೂರು: ಕುವೈತ್ ಅಗ್ನಿ ದುರಂತದಲ್ಲಿ ಸಾವಿಗೀಡಾಗಿರುವ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಸರಸಂಬ ಗ್ರಾಮದ 40 ವರ್ಷದ ವಿಜಯ ಕುಮಾರ್ ಬಿನ್ ಕೊಬ್ಬಣ್ಣ ಪ್ರಸನ್ನ ಅವರ ಅವಲಂಬಿತ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಐದು ಲಕ್ಷ ರೂ.ಗಳ ಪರಿಹಾರವನ್ನು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಇದನ್ನು ಓದಿ : ಕಾರು ರಿವರ್ಸ್‌ ತೆಗೆದುಕೊಳ್ಳಲು ಹೋಗಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಕಾರು; ಯುವತಿ ಮೃತ

ಕಳೆದ ಎಂಟು ವರ್ಷಗಳಿಂದ ವಾಹನ ಚಾಲಕರಾಗಿ ಕುವೈತ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅನಿವಾಸಿ ಭಾರತೀಯ ವಿಜಯ ಕುಮಾರ್ ಅವರ ಕುಟುಂಬದಲ್ಲಿ ಅವರ ಅಣ್ಣ ತಮ್ಮಂದಿರುವ ಸೇರಿದಂತೆ 8 ಜನ ಅವಲಂಬಿತರಿದ್ದಾರೆ. ಇವರ ಜೀವನ ನಿರ್ವಹಣೆ ದುಸ್ತರವಾಗುವುದರಿಂದ ಕೇರಳ ಸರ್ಕಾರ ಅಗ್ನಿ ದರುಂತದಲ್ಲಿ ಮೃತರ ಕುಟಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿರುವಂತೆಯೇ ರಾಜ್ಯ ಸರ್ಕಾರವೂ ಆರ್ಥಿಕ ನೆರವು ಘೋಷಿಸಬೇಕೆಂದು ರಾಜ್ಯ ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ: ಆರತಿ ಕೃಷ್ಣ ಅವರ ಮನವಿಗೆ ಸ್ಪಂದಿಸಿ ಮುಖ್ಯಮಂತ್ರಿಗಳು ಮೃತ ವಿಜಯಕುಮಾರ್ ಕುಟುಂಬಕ್ಕೆ ಐದು ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒದಗಿಸಲು ಸೂಚಿಸಿದ್ದಾರೆ.

ಇದನ್ನು ನೋಡಿ : ‘ಗಾಂಧೀಜಿಯ ಹ೦ತಕ’ – ಪುಸ್ತಕದಲ್ಲಿ ಏನಿದೆ? – ವೀರಶೆಟ್ಟಿ ಬಿ. ಗಾರಂಪಳ್ಳಿಯವರ ವಿಶ್ಲೇಷಣೆJanashakthi Media

Donate Janashakthi Media

Leave a Reply

Your email address will not be published. Required fields are marked *