ರಾಜಕೀಯ ಮತ್ತು ಕುಟುಂಬವನ್ನು ತ್ಯಜಿಸಿದ ಲಾಲು ಯಾದವ್ ಪುತ್ರಿ

ಪಟ್ನಾ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ)-ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಸೋತ ಬೆನ್ನಲ್ಲೇ ಲಾಲು ಪ್ರಸಾದ್ ಯಾದವ್  ಪುತ್ರಿ ಮತ್ತು ತೇಜಸ್ವಿ ಯಾದವ್ ಸಹೋದರಿ ರೋಹಿಣಿ ಆಚಾರ್ಯ ಅವರು ರಾಜಕೀಯ ಮತ್ತು ಕುಟುಂಬವನ್ನು ತ್ಯಜಿಸುತ್ತಿರುವುದಾಗಿ ತಮ್ಮ ಸಾಮಾಜಿಕ ಮಾಧ್ಯಮ ʻಎಕ್ಸ್‌ʼ ನಲ್ಲಿ ಘೋಷಿಸಿದ್ದಾರೆ.
‘ನಾನು ರಾಜಕೀಯ ಮತ್ತು ನನ್ನ ಕುಟುಂಬವನ್ನು ತ್ಯಜಿಸುತ್ತಿದ್ದೇನೆ. ತೇಜಸ್ವಿ ಅವರ ಆಪ್ತರಾದ ಸಂಜಯ್‌ ಯಾದವ್ ಮತ್ತು ರಮೀಜ್ ಅವರು ನನ್ನನ್ನು ಕೇಳಿಕೊಂಡಿದ್ದು ಇದನ್ನೇ. ನಾನೇ ಎಲ್ಲಾ ಆಪಾದನೆಗಳನ್ನು ಹೊರುತ್ತಿದ್ದೇನೆ’ ಎಂದು ರೋಹಿಣಿ ಆಚಾರ್ಯ ಪೋಸ್ಟ್ ಮಾಡಿದ್ದಾರೆ.

ಬಿಹಾರದ ರಾಜಕೀಯಕಣದಲ್ಲಿ ಮುಖ್ಯಮಂತ್ರಿ ನಿತೀಶ್‌ ಕುಮಾರ್‌– ಪ್ರಧಾನಿ ನರೇಂದ್ರ ಮೋದಿ (ನಿ–ಮೋ) ಜೋಡಿಯ ಸುನಾಮಿಯ ಅಲೆಗೆ ಎನ್‌ಡಿಎ ಮೈತ್ರಿಕೂಟವು ಪ್ರಚಂಡ ದಿಗ್ವಿಜಯ ಸಾಧಿಸಿದೆ. ವಿಪಕ್ಷ ನಾಯಕ ರಾಹುಲ್‌ ಗಾಂಧಿ– ತೇಜಸ್ವಿ ಯಾದವ್‌ ಜೋಡಿ ನೇತೃತ್ವದ ಮಹಾಮೈತ್ರಿಕೂಟ ತರಗೆಲೆಯಂತೆ ದೂಳೀಪಟಗೊಂಡಿದೆ.

ಇದನ್ನೂ ಓದಿ: ಅಲ್ ಫಲಾಹ್ ವಿ.ವಿ ಸದಸ್ಯತ್ವ ಅಮಾನತು: ಭಾರತೀಯ ವಿಶ್ವವಿದ್ಯಾಲಯಗಳ ಸಂಘ

ಮೋದಿ–ನಿತೀಶ್‌ ಜೋಡಿಯ ಪ್ರಭಾವಳಿಯ ನೆರವಿನಿಂದ ಮೈತ್ರಿಕೂಟವು 203 ಸ್ಥಾನಗಳನ್ನು ಗೆದ್ದು ಬೀಗಿದೆ. ಇತ್ತ ಮಹಾಘಟಬಂಧನ್‌ 34 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಷ್ಟೇ ಶಕ್ತವಾಗಿದೆ.

2010ರಲ್ಲಿ ನಿತೀಶ್– ಬಿಜೆಪಿಯ ಸುಶೀಲ್‌ ಕುಮಾರ್ ಜೋಡಿ ಮಾಡಿದ ಸಾಧನೆಯನ್ನು ಪುನರಾವರ್ತಿಸಿದೆ. ಕಳೆದ ಚುನಾವಣೆಯಲ್ಲಿ 12 ಸಾವಿರ ಮತಗಳ ಕಿರು ಅಂತರದಿಂದ ಸೋತ ಬಿಹಾರವನ್ನು ಈ ಸಲ ಗೆಲ್ಲಲೇಬೇಕೆಂಬ ಛಲದಿಂದ ಹೋರಾಡಿದ ಮಹಾಮೈತ್ರಿಯ ಮಹದಾಸೆ ಭಗ್ನಗೊಂಡಿದೆ.

ಎನ್‌ಡಿಎ–ಮಹಾಮೈತ್ರಿಯ ನೇರ ಸ್ಪರ್ಧೆಯ ಕಣದಲ್ಲಿ ತ್ರಿಕೋನ ಸ್ಪರ್ಧೆಯ ಭರವಸೆ ಮೂಡಿಸಿದ್ದ ಚುನಾವಣಾ ತಂತ್ರಜ್ಞ ಪ್ರಶಾಂತ್‌ ಕಿಶೋರ್ ಅವರ ಜನ ಸುರಾಜ್‌ ಪಕ್ಷವು ನೀರಗುಳ್ಳೆಯಂತೆ ಒಡೆದು ಹೋಗಿದೆ. 10ನೇ ಬಾರಿಗೆ ಮುಖ್ಯಮಂತ್ರಿ ಗಾದಿಗೆ ಏರಲು ನಿತೀಶ್ ಅಣಿಯಾಗಿದ್ದಾರೆ.

ಇದನ್ನೂ ನೋಡಿ: CITU ರಾಜ್ಯ ಸಮ್ಮೇಳನ ಹಾಸನ | 36 ಸಾವಿರ ಕನಿಷ್ಠ ವೇತನಕ್ಕಾಗಿ, ಗುತ್ತಿಗೆ ಪದ್ದತಿ ಿರುದ್ಧ ಹೋರಾಟದ ನಿರ್ಣಯ

Donate Janashakthi Media

Leave a Reply

Your email address will not be published. Required fields are marked *