ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ತುಳಸಿಕೆರೆ ಎಂಬ ಗ್ರಾಮದಲ್ಲಿ ಅನಾರೋಗ್ಯ ಪೀಡಿತನನ್ನು ಡೋಲಿಯ ಮೂಲಕ ಆಸ್ಪತ್ರೆಗೆ ಸಾಗಿಸಿದ ಘಟನೆ ನಡೆದಿದೆ. ರಸ್ತೆ ಇಲ್ಲದೆ ಅಂಬುಲೆನ್ಸ್ ಬಾರದ ಕಾರಣ ರೋಗಿ ಮತ್ತು ಸ್ಥಳೀಯರು ಪರದಾಟ ನಡೆಸಿದ್ದಾರೆ.
ಹನೂರು ತಾಲೂಕಿನ ತುಳಸಿಕೆರೆ ಗ್ರಾಮದಲ್ಲಿ ಈ ಒಂದು ಹೃದಯವಿದ್ರಾವಕ ಘಟನೆ ನಡೆದಿದೆ.
ಇದನ್ನೂ ಓದಿ: ಇನ್ನು ಪಿಎಫ್ ಹಣವನ್ನು ಎಟಿಎಂ ಮೂಲಕ 3 ದಿನಗಳಲ್ಲಿ ಹಿಂತೆಗೆದುಕೊಳ್ಳಬಹುದು!
ಬಳಲಿ ನಿತ್ರಾಣರಾಗಿದ್ದ ಪುಟ್ಟ ಎಂಬ ವ್ಯಕ್ತಿಯನ್ನು 8 ಕಿಲೋಮೀಟರ್ ವರೆಗೂ ಹೊತ್ತುಕೊಂಡು ಜನರು ತಮಿಳುನಾಡಿನ ಗೋಳಮತ್ತುರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗ್ರಾಮಕ್ಕೆ ಸೌಕರ್ಯ ಕಲ್ಪಿಸುವಂತೆ ಇದೀಗ ಜನರು ಒತ್ತಾಯಿಸುತ್ತಿದ್ದಾರೆ.
ಇದನ್ನೂ ನೋಡಿ: ಇಂಗ್ಲೀಷ್ ಕಲಿಯೋಣ | ಸರ್ವನಾಮಗಳು – Pronouns | ತೇಜಸ್ವಿನಿ Janashakthi Media