ಬೆಳಗಾವಿ: ಜಿಲ್ಲೆಯ ಇಟಗಿ ಕ್ರಾಸ್ ಬಳಿ ರಸ್ತೆ ಕಾಮಗಾರಿ ನಡೆಸುತ್ತಿದ್ದವರ ಮೇಲೆ ಟ್ಯಾಂಕರ್ ಲಾರಿಯೊಂದು ಹರಿದು ಹೋಗಿದ್ದು, ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜೂನ್ 1 ಭಾನುವಾರದಂದು ನಡೆದಿದೆ.
ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಹೆದ್ದಾರಿಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕ್ಕಾರ್ಮಿಕರ ಮೇಲೆಯೇ ಲಾರಿ ಹರಿದಿದೆ.
ಇದನ್ನೂ ಓದಿ: ಬಾನು ಮುಷ್ತಾಕ್ ಅವರನ್ನು ಪ್ರಧಾನಿ ಏಕೆ ಅಭಿನಂದಿಸಲಿಲ್ಲ?
ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಓರ್ವ ಕಾರ್ಮಿಕ ಹಾಗೂ ಟ್ಯಾಂಕರ್ ಚಾಲಕನ ಸ್ಥಿತಿ ಗಂಭೀರವಾಗಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕಿತ್ತೂರು ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.
ಇದನ್ನೂ ನೋಡಿ: ಹೊಟ್ಟೆಗೆ ಹಿಟ್ಟಿಲ್ಲದ ಭಾರತವೂ, ಆರ್ಥಿಕವಾಗಿ 4ನೆ ಸ್ಥಾನ ಎನ್ನುವ ಜುಟ್ಟಿಗೆ ಮಲ್ಲಿಗೆ ಹೂವೂ.. Janashakthi Media