ಬಳ್ಳಾರಿ| ಹಾಡಹಗಲೇ ಬಳ್ಳಾರಿ ಪುರಸಭೆ ಸದಸ್ಯನ ಮೇಲೆ ಮಚ್ಚಿನಿಂದ ಹಲ್ಲೆ ಪ್ರಕರಣ ದಾಖಲು

ಬಳ್ಳಾರಿ: ಹಾಡಹಗಲೇ ಪುರಸಭೆ ಸದಸ್ಯನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಲಾಗಿರುವ ಭಯಾನಕ ಘಟನೆ ಬಳ್ಳಾರಿ ಜಿಲ್ಲೆ ತೋರಣಗಲ್ ಪಟ್ಟಣದ ಘೋರ್ಪಡೆ ನಗರದಲ್ಲಿ ನಡೆದಿದೆ. ಪುರಸಭೆ ಸದಸ್ಯ ನಾಗರಾಜ ನಾಯ್ಕ(32) ಮೇಲೆ ಶಿವಕುಮಾರ್​​​​​​ ಎಂಬುವವರು ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಇವರಿಬ್ಬರ ನಡುವೆ ಚರಂಡಿ ವಿಚಾರಚಾಗಿ ದ್ವೇಷ ಇತ್ತು ಅದೇ ದ್ವೇಷದ ಹಿನ್ನೆಲೆ ಹಲ್ಲೆ ನಡೆಸಲಾಗಿದೆ. ತೆಲೆಗೆ, ಬೆನ್ನಿಗೆ, ಕೈಗಳಿಗೆ ಮಚ್ಚಿನಿಂದ ಹಲ್ಲೆ ಆಗಿದೆ.

11ನೇ ವಾರ್ಡ್​ನ ಪುರಸಭೆ ಸದಸ್ಯನಾಗಿರುವ ನಾಗರಾಜ ನಾಯ್ಕ ಹಾಗೂ ಶಿವಕುಮಾರ್ ಅವರಿಗೆ ಕಳೆದ ಒಂದು ವರ್ಷದಿಂದ ಮನೆ ಮುಂದೆ ಇರುವ ಚರಂಡಿ ವಿಚಾರವಾಗಿ ಗಲಾಟೆಗಳು ನಡೆಯುತ್ತಿದ್ದವು. ಅದೇ ರೀತಿ ಗಲಾಟೆ ನಡೆದಿದ್ದು ಈ ವೇಳೆ ಮಾತಿಗೆಮಾತು ಬೆಳೆದು ನಾಗರಾಜ ಮೇಲೆ ಮಚ್ಚಿನಿಂದ ಶಿವರಾಜ್ ಹಲ್ಲೆ ನಡೆಸಿದ್ದಾರೆ. ಗಾಯಾಳು ನಾಗರಾಜ ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತೋರಣಗಲ್​​​​ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ : ಕಾಂಗ್ರೆಸ್‌ಗೆ ಗೆಲುವು, ಬಿಜೆಪಿಗೆ ಮುಖಭಂಗ

ಹಲ್ಲೆಯ ಭೀಕರತೆ ಬಿಚ್ಚಿಟ್ಟ ಸ್ನೇಹಿತ

ಇನ್ನು ಘಟನೆ ಸಂಬಂಧ ಹಲ್ಲೆ ವೇಳೆ ಜೊತೆಗಿದ್ದ ಸ್ನೇಹಿತ ರಫೀಕ್ ಪ್ರತಿಕ್ರಿಯೆ ನೀಡಿದ್ದು ಘಟನೆ ಸಂದರ್ಭದ ಭೀಕರತೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ನಾಗರಾಜ್ ಮತ್ತು ನಾನು ಇಬ್ಬರು ಸ್ನೇಹಿತರು, ದೀಪಾವಳಿ ಹಬ್ಬಕ್ಕೆ ಬಟ್ಟೆ ತರುವುದಕ್ಕೆ ಅಂತಾ ಹೋರಟಿದ್ವಿ. ಬೈಕ್ ಮೇಲೆ ಇಬ್ಬರು ಹೋಗುತ್ತಿದ್ವಿ, ಆಗ ಶಿವಕುಮಾರ್ ಬೈಕ್ ಅಡ್ಡಗಟ್ಟಿದ. ಯಾಕೆ ಅಡ್ಡ ಗಟ್ಟಿದೆ ಎಂದು ಕೇಳುವ ಮೊದಲೇ ನಾಗರಾಜ್ ಮೇಲೆ ಹಲ್ಲೆ ಮಾಡಿದ. ಗ್ರಾಮಸ್ಥರ ಸಮ್ಮುಖದಲ್ಲಿ ಹಲ್ಲೆ ಮಾಡಿದ, ಬಿಡಿಸಲು ಯಾರು ಮುಂದೆ ಬಂದರೂ ಅವರ ಮೇಲೆ ಮಚ್ಚು ಬೀಸುತಿದ್ದ.

ಹೀಗಾಗಿ ನಾಗರಾಜ್ ಮೇಲಿನ ಹಲ್ಲೆ ತಡೆಯಲು ಆಗಲಿಲ್ಲ. ನಾಗರಾಜ್ ಕುಟುಂಬಕ್ಕೆ ಹಾಗೂ ಶಿವಕುಮಾರ್ ಕುಟುಂಬಕ್ಕೆ ಹಳೆಯ ದ್ವೇಷ ಇತ್ತು.  ನಿನ್ನೆ ರಾತ್ರಿಯೂ ನಾಗರಾಜ್ ಜೊತೆಗೆ ಶಿವು ಜಗಳ ಮಾಡಿಕೊಂಡಿದ್ದ. ಅದಕ್ಕೆ ಬಂದು ಹಲ್ಲೆ ಮಾಡಿದ್ದಾನೆ, ಶಿವಕುಮಾರ್ ಮನೆ ಮಂದಿ ಹಲ್ಲೆ ಮಾಡುವುದನ್ನು ನಿಂತು ನೋಡುತಿದ್ದರು. ನಾ ಬಿಡಿಸಲು ಮು‌ಂದೆ ಹೋದರೆ ನನ್ನ ಮೇಲೂ ಮಚ್ಚು ಬೀಸಿದ. ಜನರ ಮೇಲೂ ಮಚ್ಚು ಬೀಸಿದ್ದಾನೆ ಎಂದು ರಫೀಕ್ ತಿಳಿಸಿದ್ದಾರೆ.

ವಿಡಿಯೋ ನೋಡಿ:

Donate Janashakthi Media

Leave a Reply

Your email address will not be published. Required fields are marked *