“ಸೌಜನ್ಯಳಿಗೆ ಆದ ಗತಿಯೇ ನಿನ್ನ ಮಗಳಿಗೆ ಆಗುತ್ತೆ” ಮಹೇಶ್ ವಿಕ್ರಮ್ ಹೆಗ್ಡೆಯಿಂದ ಬೆದರಿಕೆ – ಪ್ರಕರಣ ದಾಖಲು

ಬೆಂಗಳೂರು : ವ್ಯಕ್ತಿಯೋರ್ವರಿಗೆ ಬೆದರಿಕೆಹಾಕಿ ಮಾನಹಾನಿಕಾರ ಕಾಮೆಂಟ್ ಹಾಕಿದ ಆರೋಪದಡಿ ಮಹೇಶ್ ವಿಕ್ರಮ್ ಹೆಗ್ಡೆ ವಿರುದ್ಧ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

ಸುಳ್ಳು ಸುದ್ದಿ ಹರಡುವ ಪೋಸ್ಟ್ ಕಾರ್ಡ್‌ ಹಾಗೂ ಟಿವಿ ವಿಕ್ರಮ ಮುಖ್ಯಸ್ಥ ಮಹೇಶ್ ವಿಕ್ರಮ್ ಹೆಗ್ಡೆ ಟಿವಿ ವಿಕ್ರಮ್ ಅಧಿಕೃತ ಫೇಸ್‌ಬುಕ್‌ ಪೇಜ್‌ನಲ್ಲಿ ತಮಗೆ ಬೆದರಿಕೆ ಹಾಕಿ, ನನ್ನ ಮಗಳ ಬಗ್ಗೆ ಅತ್ಯಂತ ಕೀಳಾಗಿ ಕಾಮೆಂಟ್ ಮಾಡಿದ್ದಾರೆ ಎಂದು ಸುರೇಶ್ ಬಾಬು ಎನ್ನುವವರು ಪ್ರಕರಣ ದಾಖಲಿಸಿದ್ದಾರೆ.

ಮಹೇಶ್ ಹೆಗಡೆ, ಸುರೇಶ್ ಬಾಬು ಅವರಿಗೆ ಕರೆ ಮಾಡಿ ನಾವು ಸೌಜನ್ಯಳನ್ನೇ ಬಿಟ್ಟಿಲ್ಲ. ಅಂತಹ ಕಟೀಲ್ ಕೈನಲ್ಲೂ ಏನೂ ಮಾಡಲು ಆಗಿಲ್ಲ. ಇನ್ನು ನೀನು ಏನ್ ಕಿತ್ಕೊಳ್ತಿಯಾ? ಎಂದು ಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ಹೇಳಲಾಗಿದೆ.

ಈ ಸುದ್ದಿ ಓದಿಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನ : ಮರೆಮಾಚಿದ ಸತ್ಯಗಳು

“ನಿನ್ನ ಮಗಳು ನಾರಾಯಣ ಸ್ವಾಮಿ ಜೊತೆ ಮಲಗಿದ್ದಾಳೆ ಅಂತ ಒಪ್ಪು” ಕೇಂದ್ರ ಸರ್ಕಾರ ನಮ್ಮ ಕೈಯಲ್ಲಿದೆ ಸೌಜನ್ಯಳಿಗೆ ಆದ ಗತಿಯೇ ನಿನ್ನ ಮಗಳಿಗೆ ಆಗುತ್ತೆ ಎಂದೆಲ್ಲಾ ಬೆದರಿಕೆ ಹಾಕಿದ್ದು, ನಿನ್ನ ಮಗಳು ರೂಮಿನಲ್ಲಿಯೇ ಇದ್ದಾಳ ನೋಡು ಎಂದು ಕಾಮೆಂಟ್‌ ಮಾಡಿದ್ದಾರೆ.

ಹೀಗಾಗಿ ಆರೋಪಿ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ದೂರದಾರ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.

 

ಈ ವಿಡಿಯೋ ನೋಡಿ :ಹಿಂದೂ ಧರ್ಮದ ಬಗ್ಗೆ ವಿಶ್ವ ಕವಿ ಕುವೆಂಪು ಹೇಳಿದ್ದೇನು?

 

Donate Janashakthi Media

Leave a Reply

Your email address will not be published. Required fields are marked *