ಮಹಿಳಾ ವಕೀಲರೊಂದಿಗೆ ಅಸಭ್ಯ ವರ್ತನೆ; ಮಂಜುನಾಥ್‌ ಕುಸುಗಲ್‌ ಅಮಾನತ್ತಿಗೆ ಎಐಎಲ್‌ಯು ಆಗ್ರಹ

ಬೆಂಗಳೂರು: ಮಹಿಳೆಯರ ಅಪಹರಣ,  ಮಹಿಳೆಯರು, ಮಕ್ಕಳ ಲೈಂಗಿಕ ದೌರ್ಜನ್ಯ ನಡೆದ ಘಟನೆ ಕುರಿತು ಮಾಹಿತಿಯನ್ನು ಪಡೆಯಲು ಧಾರವಾಡ ಜಿಲ್ಲೆಯಲ್ಲಿನ ಗ್ರಾಮೀಣ ಪೊಲೀಸ್ ಠಾಣೆಗೆ ಹೋದಾಗ ಮಹಿಳಾ ವಕೀಲರ ಜೊತೆಗೆ ಇನ್ಸ್‌ಪೆಕ್ಟರ್ ಮಂಜುನಾಥ ಕುಸುಗಲ್ ಅಸಭ್ಯವಾಗಿ ವರ್ತಿಸಿರುವುದು ಖಂಡನೀಯ, ಕೂಡಲೇ ಅವರನ್ನು ಸೇವೆಯಿಂದ ಅಮಾನತ್ತು ಮಾಡಬೇಕೆಂದು ಅಖಿಲ ಭಾರತ ವಕೀಲರ ಒಕ್ಕೂಟ(ಎಐಎಲ್‌ಯು) ರಾಜ್ಯ ಸಮಿತಿಯು ಆಗ್ರಹಿಸಿದೆ.

ಇನ್ಸ್‌ಪೆಕ್ಟರ್ ಮಂಜುನಾಥ ಕುಸುಗಲ್ ರವರನ್ನು ಇಲಾಖೆಯ ಮೇಲಧಿಕಾರಿಗಳು ರಕ್ಷಣೆ ಮಾಡಿಕೊಳ್ಳುವ ಬದಲು ತತ್ತ ಕ್ಷಣ ಸೇವೆಯಿಂದ ಅಮಾನತ್ತು ಮಾಡಬೇಕು ಎಂದು ಎಐಎಲ್‌ಯು ರಾಜ್ಯ ಕಾರ್ಯದರ್ಶಿ ಶ್ರೀನಿವಾಸ ಕುಮಾರ ಆಗ್ರಹಿಸಿದ್ದಾರೆ. ಕೂಡಲೇ ಕ್ರಮವಹಿಸದಿದ್ದಲ್ಲಿ ರಾಜ್ಯಾದ್ಯಂತ ಪ್ರಬಲ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *