ಆರೋಗ್ಯಕರ ಪರಿಸರ ಸಮತೋಲನವನ್ನು ಕಾಪಾಡುವುದು ಅತ್ಯಗತ್ಯವಾಗಿದೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ಪ್ರಸ್ತಕ ವರ್ಷ 5 ಕೋಟಿ ಸಸಿಗಳನ್ನು ರಾಜ್ಯಾದ್ಯಾಂತ ನೆಟ್ಟು, ಅವು ಮರಗಳಾಗಿ ಬೆಳೆಯುವಂತೆ ಕಾಳಜಿ ವಹಿಸುವುದರ ಜೊತೆಗೆ ಎಷ್ಟು ಸಸಿಗಳು ಉಳಿದಿವೆ ಎಂಬ ಬಗ್ಗೆ ಜಿಯೋ ಟ್ಯಾಗ್‌ ಮೂಲಕ ಅಡಿಟ್‌ ಮಾಡಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ.

ವಿಕಾಸಸೌಧದಲ್ಲಿ ನಿನ್ನೆ ಶುಕ್ರವಾರ (ಜೂನ್‌ 23)  ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯ್ತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆಗೆ  ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಚಿವರು, ಅರಣ್ಯ ವ್ಯಾಪ್ತಿ ಮತ್ತು ಹಸಿರು ವ್ಯಾಪ್ತಿ ಹೆಚ್ಚಿಸುವುದು ಸರ್ಕಾರದ ಗುರಿಯಾಗಿದ್ದು, ಒಟ್ಟಾರೆ ಭೌಗೋಳಿಕ ಪ್ರದೇಶದ ಪೈಕಿ ಅರಣ್ಯ ಹಾಗೂ ಹಸಿರು ವ್ಯಾಪ್ತಿ ಕನಿಷ್ಠ ಶೇ.33ಕ್ಕೆ ಇರಬೇಕು ಎಂಬುದು ಮಾನದಂಡ. ಆದರೆ ಪ್ರಸ್ತುತ ರಾಜ್ಯದಲ್ಲಿ ಈ ವ್ಯಾಪ್ತಿ ಸುಮಾರು 20.19ರಷ್ಟು ಮಾತ್ರವೇ ಇದ್ದು, ಸರ್ಕಾರದ ವ್ಯಾಪ್ತಿ ಹೆಚ್ಚಳ ಮಾಡುವದು ನಮ್ಮ ಆದ್ಯ ಕರ್ತವ್ಯವೆಂದು ಪರಿಗಣಿಸಿದೆ ಎಂದರು. ನಾವು ಪ್ರಕೃತಿ ಮತ್ತು ಪರಿಸರವನ್ನು ರಕ್ಷಿಸಿದರೆ ಪ್ರಕೃತಿ ನಮ್ಮನ್ನು ರಕ್ಷಿಸುತ್ತದೆ. ಅರಣ್ಯ ಇಲಾಖೆ ಮುಖ್ಯವಾಗಿ ಅರ‍ಣ್ಯ ಸಂರಕ್ಷಿಸಬೇಕು. ಆ ಕಾರ್ಯವನ್ನು ಇಲಾಖೆ ಮಾಡುತ್ತದೆ. ಮಕ್ಕಳಲ್ಲಿ ಪರಿಸರ ಕಾಳಜಿ ಮೂಡಿಸಲು ಯೋಜನೆ ರೂಪಿಸಿದ್ದು, ಶಿಕ್ಷಣ ಇಲಾಖೆಯೂ ಸೇರಿದಂತೆ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳ ಸಹಯೋಗದಲ್ಲಿ ಪ್ರಸ್ತಕ ವರ್ಷ 5 ಕೋಟಿ ಸಸಿ ನೆಟ್ಟು, ಪೋಷಿಸುವ ಮೂಲಕ ಯೋಜನೆಯನ್ನು ಯಶಸ್ವಿಗೊಳಿಸಲಾಗುವುದು. ಕೋವಿಡ್‌ ಸಂದರ್ಭದಲ್ಲಿ ಆಕ್ಸಿಜನ್‌ ಎಷ್ಟು ಮಹತ್ವದ್ದು ಎಂಬುವುದು ಇಡೀ  ಮಾನವ ಕುಲಕ್ಕೆ ಅರಿವಾಯಿತು. ಹೀಗಾಗಿ ನಮಗೆ ಪ್ರಾಣವಾಯು ನೀಡುವ ವೃಕ್ಷಗಳನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದ್ದು, ಮಾಧ್ಯಮಗಳು ಈ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಇದನ್ನೂ ಓದಿ:ಮುಂದಿನ ಪೀಳಿಗೆಯ ಉತ್ತಮ ಆರೋಗ್ಯಕ್ಕಾಗಿ ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ

ಜುಲೈ 1ರಿಂದ 7 ದಿನಗಳ ಕಾಲ ಆಚರಿಸಲಾಗುತ್ತಿರುವ ವನಮಹೋತ್ಸವಕ್ಕಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯ್ತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೂ ಇದ್ದು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸದಸ್ಯ ಕಾರ್ಯದರ್ಶಿ ಆಗಿರುತ್ತಾರೆ. ಜಿಲ್ಲೆಯ ಇತರ ಎಲ್ಲಾ ಇಲಾಖೆಗಳ ಸಹಯೋಗದೊಂದಿಗೆ ಈ ಕಾರ್ಯಕ್ರಮ ರೂಪಿಸಲಾಗಿದೆ. ಹಸಿರು ವ್ಯಾಪ್ತಿ ಹೆಚ್ಚಳ ಕೇವಲ ಅರಣ್ಯ ಇಲಾಖೆ ಒಂದರಿಂದ ಆಗುವ ಕಾರ್ಯವಲ್ಲ. ಇದರಲ್ಲಿ ಇಡೀ ಸಮಾಜ ಪಾಲ್ಗೊಳ್ಳಬೇಕು. ಪ್ರತಿಯೊಬ್ಬರು ಸಸಿ ನೆಟ್ಟು ಬೆಳೆಸುವುದು ತಮ್ಮ ಕರ್ತವ್ಯವೆಂದು ತಿಳಿಯಬೇಕು. ಆ ನಿಟ್ಟಿನಲ್ಲಿ ಎಲ್ಲಾರು ಕೈ ಜೋಡಿಸಿ  ಕೆಲಸ ಮಾಡಿದರೆ ಇದು ಜನಾಂದೋಲನವಾಗುತ್ತದೆ ಎಂದರು. ಇಂಧು ಹಸಿರು ವ್ಯಾಪ್ತಿ ಕ್ಷೀಣಿಸುತ್ತಿರುವುದರ ಪರಿಣಾಮ ಮತ್ತು ಕೈಗಾರಿಕೆಗಳು, ವಾಹನಗಳು ಮತ್ತು ಮನೆಗಳಲ್ಲಿ ಎಲೆಕ್ಟ್ರಿಕ್‌ ಉಪಕರಣಗಳಿಂದ ಹೊರಹೊಮ್ಮುವ ಶಾಕ,ತ್ಯಾಜ್ಯ, ಹೊಗೆಯಿಂದ ಹಸಿರು ಮನೆ ಅನಿಲ ಪ್ರಮಾಣ ಹೆಚ್ಚಾಗಿ  ಓಜೋನ್‌ ಪದರಕ್ಕೂ ಹಾನಿಯಾಗಿ ಹವಾಮಾನ ವೈಪರೀತ್ಯ ಆಗುತ್ತಿರುವುದು ನಮಗೆಲ್ಲಾ ತಿಳಿದ ವಿಷಯವಾಗಿದೆ. ಕುಡಿಯುವ ನೀರು,ಸೇವಿಸುವ ಗಾಳಿ ಮಲಿನವಾಗುತ್ತಿದೆ. ಈ  ಬಗ್ಗೆ ಎಲ್ಲರಲ್ಲೂ ಜಾಗೃತಿ ಮೂಡಿಸಬೇಕು. ನಾವೆಲ್ಲಾರೂ ಸೇರಿ ಪ್ರಕೃತಿ ಪರಿಸರ ಉಳಿಸಬೇಕು. ನಮ್ಮ ಅರಣ್ಯ ಇಲಾಖೆ 5 ಕೋಟಿ ಸಸಿ ನೆಡಬೇಕೆಂದು ತನ್ನ ನರ್ಸರಿಗಳಲ್ಲಿ ವ್ಯಾಪಕ ಶ್ರೇಣಿಯ ಸಸಿ ಬೆಳೆಸಿದೆ. 2.5 ಕೋಟಿಯಷ್ಟು ಸಸಿಗಳನ್ನು ಅರ‍ಣ್ಯ  ವ್ಯಾಪ್ತಿಯಲ್ಲಿ ಇಲಾಖೆಯ ವತಿಯಿಂದ ನೆಡಲಾಗುತ್ತಿದೆ ಎಂದು ಖಂಡ್ರೆ ಹೇಳಿದರು.

ಇದನ್ನೂ ಓದಿ:ಬೆಂಗಳೂರಿನಾದ್ಯಂತ 1 ಲಕ್ಷ ಸಸಿ ನೆಡಲು ಬಿಬಿಎಂಪಿ ಯೋಜನೆ

ದರ ಇಳಿಕೆ: ತಾವು ಅಧಿಕಾರ ವಹಿಸಿಕೊಳ್ಳುವ ಮೊದಲೇ ರೈತರಿಗೆ ಪೂರೈಕೆ ಮಾಡುತ್ತಿದ್ದ ಸಸಿಗಳ ದರವನ್ನು ಹೆಚ್ಚಳ ಮಾಡಲಾಗಿತ್ತು. ಈ ಬಗ್ಗೆ ಪುನರ್‌ ಪರಿಶೀಲನೆ ಮಾಡಿ 5×8 ಗಿಡಗಳಿಗೆ 2 ರೂ., 6 x8 ಗಿಡಗಳಿಗೆ 3 ರೂ. ಮತ್ತು 8 x12 ಗಿಡಗಳಿಗೆ 6 ರೂ. ನಿಗದಿ ಮಾಡಲಾಗಿದೆ ಎಂದು ತಿಳಿಸಿದರು. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲೂ ಗ್ರಾಮೀಣ ಪ್ರದೇಶದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಅದೇ  ರೀತಿ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಸ್ಥಳೀಯ ನಗರ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ರೂಪಿಸಲಾಗುವುದು ಎಂದು ತಿಳಿಸಿದರು.

ಒಣ ಮಹೋ‍ತ್ಸವ ಆಗಲು ಬಿಡುವುದಿಲ್ಲ: ಯಾವುದೇ ಕಾರಣಕ್ಕೂ ವನಮಹೋತ್ಸವವನ್ನು ಒಣ ಮಹೋತ್ಸವ ಆಗಲು ಬಿಡುವುದಿಲ್ಲ. ನೆಟ್ಟ ಸಸಿಗಳು ಜೀವಂತ ಉಳಿಯಬೇಕು, ಬೆಳೆಯಬೇಕು. ಇದಕ್ಕಾಗಿ ಜಿಯೋ ಟ್ಯಾಗ್‌ ಮೂಲಕ ಆಡಿಟ್‌ ಮಾಡಿಸಲಾಗುವುದು. ಅಗತ್ಯ ಬಿದ್ದರೆ 3ನೇ ವ್ಯಕ್ತಿಯಿಂದ ಕೂಡ ಆಡಿಟ್‌ ಮಾಡಿಸಲಾಗುವುದು. ಈ ಬಾರಿ ನೆಟ್ಟ ಗಿಡಗಳ ಪೈಕಿ ಕನಿಷ್ಠ ಶೇ.80 ರಷ್ಟು ಜೀವಂತ ಉಳಿಸಿ ಬೆಳೆಸುವುದು ನಮ್ಮ ಉದ್ದೇಶವಾಗಿದೆ ಎಂದ ಅವರು, ಅಕೇಶಿಯಾ ಮತ್ತು  ನೀಲಗಿರಿ ಗಿಡಗಳಿಂದಾಗುವ ದುಷ್ಪರಿಣಾಮದ ಬಗ್ಗೆಯೂ  ಕ್ರಮ ವಹಿಸುವ ಭರವಸೆ ನೀಡಿದರು.

Donate Janashakthi Media

Leave a Reply

Your email address will not be published. Required fields are marked *