ಬಾಳೆಹೊನ್ನೂರು: ಎರಡು ವರ್ಷದಿಂದ ಬ್ಯಾಂಕಿನ ಸಿಬ್ಬಂದಿ ಸತಾಯಿಸುತ್ತಿದ್ದಾರೆ ಸಾಲ ಪಡೆಯುವಾಗ ಅಡವಿಟ್ಟಿದ್ದ ಮೂಲ ದಾಖಲೆಗಳನ್ನು ಮರುಪಾವತಿಸಿ ಎಂದು ಗ್ರಾಹಕರೊಬ್ಬರು ಬ್ಯಾಂಕಿನ ಜನರಲ್ ಮ್ಯಾನೇಜರ್ ಹಾಗೂ ವ್ಯವಸ್ಥಾಪಕ ನಿರ್ದೇಶಕರಿಗೆ ದೂರು ನೀಡಿದ್ದಾರೆ.
ಇದನ್ನೂ ಓದಿ: ಕಠ್ಮಂಡು |ಪ್ರತಿಭಟನೆ ಹಿಂಸಾಚಾರ 25 ಮಂದಿ ಮೃತ – ಪ್ರಧಾನಿ ಕೆ.ಪಿ.ಶರ್ಮಾ ಓಲಿ ರಾಜೀನಾಮೆ
ಕೊಪ್ಪ ತಾಲ್ಲೂಕಿನ ಹೇರೂರು ಗ್ರಾಮದ ವೀಣಾ ಡಾ.ಕೃಷ್ಣ ಅವರು ಎಲಮಡಲಿನ (ಸಿಂಡಿಕೇಟ್ ಬ್ಯಾಂಕ್) ಪ್ರಸ್ತುತ ಕೆನರಾ ಬ್ಯಾಂಕ್ನಿಂದ ಸಾಲ ಪಡೆದು ಮರುಪಾವತಿ ಮಾಡಿದ್ದು, ಸಾಲಕ್ಕಾಗಿ ಅಡವಿಟ್ಟಿದ್ದ ಮೂಲ ದಾಖಲೆಗಳನ್ನು ನೀಡುವಂತೆ ಅವರು ಬ್ಯಾಂಕಿನ ವ್ಯವಸ್ಥಾಪಕರಿಗೆ ಎರಡು ವರ್ಷಗಳಿಂದ ಮನವಿ ಮಾಡಿದ್ದರೂ ದಿನಕ್ಕೊಂದು ನೆಪ ಹೇಳಿ ದಾಖಲೆ ನೀಡದೆ ಸತಾಯಿಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ರಿಸರ್ವ ಬ್ಯಾಂಕ್ ಆಫ್ ಇಂಡಿಯಾದ ಆದೇಶದ ಅನ್ವಯ ಸಾಲ ಮರುಪಾವತಿಸಿದ ಒಂದು ತಿಂಗಳೊಳಗೆ ಅಡವಿಟ್ಟ ಮೂಲ ದಾಖಲೆಗಳನ್ನು ವಾಪಸ್ ಸಾಲಗಾರರಿಗೆ ನೀಡಬೇಕು. ಒಂದು ತಿಂಗಳ ಒಳಗೆ ದಾಖಲೆ ನೀಡದಿದ್ದಲ್ಲಿ ಪ್ರತಿ ದಿನಕ್ಕೆ ₹5 ಸಾವಿರ ದಂಡವನ್ನು ಗ್ರಾಹಕರಿಗೆ ಪಾವತಿಸಬೇಕು ಎಂದಿದೆ. ಈ ಹಿನ್ನಲೆಯಲ್ಲಿ ದಾಖಲೆ ನೀಡದೆ ವಿಳಂಬ ನೀತಿ ಅನುಸರಿಸಿದ ಬ್ಯಾಂಕ್ ಎರಡು ವರ್ಷದ ದಂಡದ ಮೊತ್ತವನ್ನು ಪಾವತಿಸಬೇಕು ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ನೋಡಿ: ಸಾಂಸ್ಕೃತಿಕ ಲೋಕದ ಮುಖ್ಯ ಉಸಿರು ಸಮುದಾಯ ; ಬರಗೂರು ರಾಮಚಂದ್ರಪ್ಪ Janashakthi Media
