ಮಂಡ್ಯಾ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೆಟ್ಟ ಆಮದು ನೀತಿಯಿಂದಾಗಿ ಭಾರತದ ರೈತರು ಅತ್ಯಂತ ಸಂಕಷ್ಟವನ್ನು ಅನುಭವಿಸುವ ಪರಿಸ್ಥಿತಿ ಉಂಟಾಗಿದೆ. ಸಾಮ್ರಾಜ್ಯಶಾಹಿಯ ನೇತೃತ್ವ ವಹಿಸಿರುವ ಅಮೇರಿಕಾದ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಭಾರತ ಸೇರಿದಂತೆ ಹಲವು ರಾಷ್ಟ್ರಗಳ ಮೇಲೆ ಸುಂಕ ಸಮರವನ್ನು ಸಾರಿದ್ದಾರೆ.
ಇದರಿಂದ ಭಾರತದ ಕೃಷಿ ಉತ್ಪನ್ನಗಳು ಜಾಗತಿಕ ಮಾರುಕಟ್ಟೆಯಲ್ಲಿ ತಿರಸ್ಕರಿಸಲ್ಪಡುತ್ತಿವೆ. ಇದಕ್ಕೆಲ್ಲಾ ಮುಖ್ಯ ಕಾರಣ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಅಮೇರಿಕಾರ ಮುಂದೆ ಮಂಡಿಯೂರಿ ನಡೆಸುತ್ತಿರುವ ವ್ಯಾಪಾರೀ ಒಪ್ಪಂದವೇ ಕಾರಣ ಎಂದು ಅಖಿಲ ಭಾರತ ಕಿಸಾನ್ ಸಭಾದ ರಾಷ್ಟ್ರ ಕಾರ್ಯದರ್ಶಿಗಳಾದ ಡಿ. ರವೀಂದ್ರನ್ ಆರೋಪಿಸಿದರು.
ಇದನ್ನೂ ಓದಿ: ಇನ್ನು ಮುಂದೆ ಏರ್ ಇಂಡಿಯಾ ವಿಮಾನ ಹತ್ತಲ್ಲ – ಡೇವಿಡ್ ವಾರ್ನರ್
ಮಂಡ್ಯಾ ಕರ್ನಾಟಕ ಸಂಘದ ಸಭಾಂಗಣದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಸಮಿತಿ ಏರ್ಪಡಿಸಿದ್ದ ʻಸಾಮ್ರಾಜ್ಯಶಾಹಿ ದೇಶಗಳ ಸುಂಕ ಕಡಿತ ಮತ್ತು ಕರ್ನಾಟಕ ರಾಜ್ಯದ ರೈತರ ಮೇಲಿನ ದುಷ್ಪರಿಣಾಮʼಗಳ ಕುರಿತು ನಡೆದ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಉಧ್ಘಾಟಿಸಿ ಮಾತನಾಡಿದರು.
ಭಾರತದಲ್ಲಿ ಆಹಾರ ಉತ್ಪನ್ನಗಳು, ದ್ವದಳ ಧಾನ್ಯಗಳು, ಎಣ್ಣೆಕಾಳುಗಳು, ಹಣ್ಣುಗಳನ್ನು ಅಗತ್ಯಕ್ಕೆ ತಕ್ಕಂತೆ ಉತ್ಪಾದನೆ ಮಾಡುತ್ತಿದ್ದರು ವಿದೇಶಗಳಿಂದ ಕಾರ್ಪೋರೆಟ್ ಕೃಷಿ ಮೂಲಕ ಅತ್ಯಂತ ಹೆಚ್ಚು ಸಬ್ಸಿಡಿ ಪಡೆದು ಕಡಿಮೆ ದರದಲ್ಲಿ ಉತ್ಪಾದನೆಯಾಗುವ ಕೃಷಿ ಉತ್ಪನ್ನಗಳನ್ನು ಭಾರತದಲ್ಲಿ ಸುಂಕರಹಿತವಾಗಿ ಆಮದಿಗೆ ಆಹ್ವಾನಿಸಲಾಗುತ್ತಿದೆ. ಇದು ಭಾರತದ ರೈತರ ಕುಣಿಕೆಗೆ ನೇಣುಹಗ್ಗವನ್ನು ಬಿಗಿಗೊಳಿಸುತ್ತದೆ. ಇದು ಮುಂದಿನ ದಿನಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಭಾರತದ ಕೃಷಿ ಮತ್ತು ರೈತ ಸಮುದಾಯ ಸಂಕಷ್ಟಕ್ಕೆ ಒಳಗಾಗಲಿದ್ದಾರೆ.
ಭಾರತದ ಕೃಷಿಯನ್ನು ಸಂಕಷ್ಟದಿಂದ ಪಾರು ಮಾಡಬೇಕಾದರೆ ಕೂಡಲೇ ಭಾರತದಲ್ಲಿ ಬೆಳೆಯುವ ಯಾವ ಉತ್ಪನ್ನಗಳನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಬಾರದು. ಮತ್ತು ದೇಶದಲ್ಲಿ ಬೆಳೆಯುವ ಎಲ್ಲಾ ರೈತರ ಬೆಳೆಗಳಿಗೆ ಡಾ.ಎಂ.ಎಸ್.ಸ್ವಾಮಿನಾಥನ್ ವರದಿಯ ಶಿಫಾರಸ್ಸಿನಂತೆ ಉತ್ಪಾದನಾ ವೆಚ್ಚಕ್ಕೆ ಶೇಕಡಾ 50 ರಷ್ಟು ಲಾಭಾಂಶವನ್ನು ಸೇರ್ಪಡೆಗೊಳಿಸಿ ಬೆಲೆ ನಿಗದಿಗೊಳಿಸಬೇಕು ಎಂಬ ನಿರ್ಣಯವನ್ನು ಕೈಗೊಳ್ಳಲಾಯಿತು.
ವಿಚಾರ ಸಂಕಿರಣದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕರ್ನಾಟಕ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷರಾದ ಡಾ.ಪ್ರಕಾಶ್ ಕಮ್ಮರಡಿ ಮಾತನಾಡುತ್ತಾ ಕೇಂದ್ರ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನ ಸುಂಕ ಸಮರದಿಂದಾಗಿ ಭಾರತದ ಕೃಷಿ ಉತ್ಪನ್ನಗಳು ವಾಪಸ್ ಬರುತ್ತಿವೆ. ಅದರಲ್ಲೂ ಅಡಿಕೆ ಹಾಳೆಯ ಉತ್ಪನ್ನಗಳನ್ನು ಯಾವುದೇ ಆಧಾರಗಳಿಲ್ಲದೆ ಅದರಿಂದ ಕ್ಯಾನ್ಸರ್ ರೋಗ ಹರಡುತ್ತದೆ ಎಂದು ಆರೋಪಿಸಿ ಅವುಗಳನ್ನು ವಾಪಸ್ ಕಳುಹಿಸಲಾಗುತ್ತಿದೆ. ಇದು ಕರ್ನಾಟಕದ ಅಡಿಕೆ ಬೆಳೆಗಾರರ ನಷ್ಟ ಅನುಭವಿಸುವಂತಾಗಿದೆ.
ವಿಚಾರಸಂಕಿರಣದ ಅಧ್ಯಕ್ಷತೆಯನ್ನು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಅಧ್ಯಕ್ಷರಾದ ಯು.ಬಸವರಾಜು ವಹಿಸಿದ್ದರು, ಪ್ರಧಾನ ಕಾರ್ಯದರ್ಶಿ ಟಿ.ಯಶವಂತ, ಜಿಲ್ಲಾ ಸಂಚಾಲಕರಾದ ವೇದಿಕೆಯಲ್ಲಿ. ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಪ್ರದಾನ ಕಾರ್ಯದರ್ಶಿ ದೇವಿ. ಕೃಷಿ ಕೂಲಿಕಾರರ ಸಂಘದ ರಾಜ್ಯ ಅದ್ಯಕ್ಷರಾದ ಪುಟ್ಟಮಾದು. ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಂಚಾಲಕ ಎನ್ ಎಲ್ ಭರತ್ ರಾಜ್ ಸಹ ಸಂಚಾಲಕರಾದ ಎನ್ ಲಿಂಗರಾಜಮೂರ್ತಿ, ಎಮ್ ಇ . ಮಹಾದೇವು ಪ್ರಮೀಳಾ ಅಬ್ದುಲ್ ಸುಕೂರ್. ವಿಶ್ವನಾಥ್.ಮುಂತಾದವರು ಉಪಸ್ಥಿತರಿದ್ದರು.
ಇದನ್ನೂ ನೋಡಿ: ಜನ ಸಂಖ್ಯೆಗೆ ಸಂಬಂಧಿಸಿದಂತೆ ಮಾತ್ರ ಮರು ಸಮೀಕ್ಷೆ : ಸಿದ್ದರಾಮಯ್ಯ | Janashakthi Media