ಮಂಡ್ಯ : “ಗೋ ಬ್ಯಾಕ್ ಕುಮಾರಸ್ವಾಮಿ” ಮಹಿಳೆಯರ ಪ್ರತಿಭಟನೆ

ಮಂಡ್ಯ:ಮಂಡ್ಯದಲ್ಲಿ ಜೆಡಿಎಸ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಮಹಿಳೆಯರು ಗೋ ಬ್ಯಾಕ್ ಪೋಸ್ಟರ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ಕಾಂಗ್ರೆಸ್‌ನ ಗ್ಯಾರೆಂಟಿ ಯೋಜನೆ ಟೀಕಿಸುವ ಭರದಲ್ಲಿ ಹೆಚ್‌ಡಿಕೆ ‘ ಗ್ಯಾರೆಂಟಿಯಿಂದ ಹಳ್ಳಿಯ ತಾಯಂದಿರು ದಾರಿ ತಪ್ಪಿದ್ದಾರೆ’ ಎಂದು ಹೇಳಿದ್ದರು. ಈ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಮಹಿಳೆಯರಿಂದ ಸಂಜಯ ವೃತ್ತದಲ್ಲಿ ಗೋ ಬ್ಯಾಕ್ ಕುಮಾರಸ್ವಾಮಿ ಘೋಷಣೆ ಕೂಗಿ ಪ್ರತಿಭಟನೆ ನಡೆದಿದೆ. ಕಾಂಗ್ರೆಸ್ ಮಹಿಳಾ ಘಟಕದಿಂದ ಮೈಸೂರು ಬೆಂಗಳೂರು ಹೆದ್ದಾರಿ ಕೂಡ ತಡೆದಿದ್ದು ಕೆಲ ಕಾಲ ವಾಹನ ಸಂಚಾರಕ್ಕೆ ಅಡೆತಡೆ ಉಂಟಾಯಿತು.

ಇದನ್ನೂ ಓದಿಗ್ಯಾರಂಟಿಗಳಿಂದ ಹಳ್ಳಿ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ: ಕುಮಾರಸ್ವಾಮಿ ವಿವಾದಿತ ಹೇಳಿಕೆಗೆ ಭಾರೀ ಆಕ್ರೋಶ

ತುಮಕೂರಿನಲ್ಲಿ ನಡೆದ ಚುನವಣಾ ಪ್ರಚಾರದ ವೇಳೆ ಮಾತನಡಿದ್ದ ಮಾಜಿ ಸಿಎಂ ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳ ವಿರುದ್ಧ ವಾಗ್ದಾಳಿ ನ್ಡೆಸಿದ್ದರು. ಅಲ್ಲದೇ ಗ್ಯಾರಂಟಿ ಯೋಜನೆಯಿಂದಾಗಿ ಹಳ್ಳಿಯ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು.

 

Donate Janashakthi Media

Leave a Reply

Your email address will not be published. Required fields are marked *