ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ಯುವತಿಯ ಅತ್ಯಾಚಾರ – ವೈದ್ಯನ ವಿರುದ್ದ ದೂರು ದಾಖಲು

ಮಂಗಳೂರು: ಮದುವೆ ಆಗುವುದಾಗಿ ಆಮಿಷವೊಡ್ಡಿ ಅತ್ಯಾಚಾರ ಎಸಗಿದ್ದಲ್ಲದೆ ಗರ್ಭಿಣಿಯಾದ ಬಳಿಕ ಬಲವಂತವಾಗಿ ಗರ್ಭಪಾತ ಮಾಡಿಸಿದ ದಂತ ವೈದ್ಯನ ವಿರುದ್ದ ನರ್ಸ್‌ವೊಬ್ಬರು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.

ನಗರದ ಖಾಸಗಿ ಆಸ್ಪತ್ರೆಯೊಂದರ ನರ್ಸ್ ಕೇರಳ ಮೂಲದ ದಂತ ವೈದ್ಯ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಮಾಡಿದ್ದ ಎನ್ನಲಾಗಿದೆ. ಆಕೆ ಗರ್ಭಿಣಿಯಾದಾಗ ಬಲವಂತವಾಗಿ ಮಾತ್ರೆಗಳನ್ನು ಕೊಟ್ಟು ಗರ್ಭಪಾತ ಮಾಡಿಸಿದ್ದ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನ; ಈಡೇರಿಸುವ ಪಕ್ಷಕ್ಕೆ ಮಾತ್ರ ಮತ!

23ರ ಹರೆಯದ ಯುವತಿಯು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿದ್ದು, ಈಕೆಗೆ ಮಂಗಳೂರಿನ ದಂತ ವೈದ್ಯಕೀಯ ಕಾಲೇಜಿನಲ್ಲಿ ಬಿಡಿಎಸ್ ಫೈನಲ್ ಡಿಗ್ರಿ ಓದುತ್ತಿದ್ದ ಕೇರಳ ಮೂಲದ ದಂತ ವೈದ್ಯ ಸನಲ್ ಸುಧಾಕರನ್ ಎಂಬಾತನ ಪರಿಚಯವಾಗಿತ್ತು ಎಂದು ಹೇಳಲಾಗಿದೆ. ಆತ ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ದೈಹಿಕ ಸಂಬಂಧ ನಡೆಸಿದ್ದು, ಗರ್ಭವತಿಯಾದಾಗ ಮಾತ್ರೆ ನೀಡಿ ಗರ್ಭಪಾತ ಮಾಡಿಸಿದ್ದ ಎಂದು ದೂರಿನಲ್ಲಿ ಆರೋಪಿಸಲಾಗಿದೆ

ವಂಚನೆಗೊಳಗಾದ ನರ್ಸ್‌ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರಂತೆ ಪೊಲೀಸರು ಆರೋಪಿ ದಂತ ವೈದ್ಯನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *