ಮಣಿಕಂಠ ರಾಠೋಡ ವಿರುದ್ದ ಎಫ್‌ಐಆರ್‌ ದಾಖಲು

ಚಿತ್ತಾಪುರ : ಆಡಿಯೊ ಸಂಭಾಷಣೆ ಆಧರಿಸಿ ಪಟ್ಟಣದ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ನೀಡಿದ ದೂರಿನಡಿ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಅವರ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕಾಂಗ್ರೆಸ್ ಉಸ್ತುವಾರಿ ರಣದೀಪಸಿಂಗ್ ಸುರ್ಜೆವಾಲಾ ಅವರು ಮಣಿಕಂಠ ರಾಠೋಡ ಅವರ ಆಡಿಯೊವನ್ನು ತಮ್ಮ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡು ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಈ ಕುರಿತು ಪ್ರಕರಣ ದಾಖಲಿಸಲು ಚುನಾವಣಾಧಿಕಾರಿ ಸೂಚನೆಯಂತೆ ಆಡಿಯೊ ಪರಿಶೀಲಿಸಲಾಗಿದೆ. ಅದು ಚಿತ್ತಾಪುರ ಮತಕ್ಷೇತ್ರಕ್ಕೆ ಸಂಬಂಧಿಸಿದೆ. ಚುನಾವಣಾಧಿಕಾರಿಗಳ ಸೂಚನೆಯಂತೆ ಪಟ್ಟಣದ ಫ್ಲೈಯಿಂಗ್ ಸ್ಕ್ವಾಡ್ ತಂಡದ ಅಧಿಕಾರಿ ಕರಣಕುಮಾರ ಅವರು ಸೂಕ್ತ ಕ್ರಮ ಕೈಗೊಂಡು ನಿರ್ಭೀತ ಚುನಾವಣೆ ನಡೆಸಲು ಸಹಕರಿಸುವಂತೆ ಕೋರಿ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಧಿಕಾರಿ ಕರಣಕುಮಾರ ಅವರು ನೀಡಿದ ದೂರಿನ ಪ್ರಕಾರ ನ್ಯಾಯಾಲಯದ ಅನುಮತಿ ಪಡೆದುಕೊಂಡು ಠಾಣೆಯ ಪಿಎಸ್‌ಐ ನಂದಕುಮಾರ ಅವರು ಐಪಿಸಿ ಸೆಕ್ಷೆನ್ 504, 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ.

Donate Janashakthi Media

Leave a Reply

Your email address will not be published. Required fields are marked *