ಪದ್ಮಶ್ರೀ ಪುರಸ್ಕೃತೆ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ನಿವಾಸಕ್ಕೆ ಮೇಘಾಲಯ ರಾಜ್ಯಪಾಲರ ಭೇಟಿ

ಕೊಪ್ಪಳ: ತೊಗಲುಗೊಂಬೆಯಾಟದಲ್ಲಿ ಅದ್ವೀತಿಯ ಸಾಧನೆಗಾಗಿ ಪದ್ಮಶ್ರಿ ಪ್ರಶಸ್ತಿ ಪುರಸ್ಕೃತರಾದ ಕೊಪ್ಪಳ ತಾಲ್ಲೂಕಿನ ಮೋರನಾಳ ಗ್ರಾಮದ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ಅವರ ನಿವಾಸಕ್ಕೆ ಮೇಘಾಲಯ ರಾಜ್ಯದ ರಾಜ್ಯಪಾಲ ಚಂದ್ರಶೇಖರ ಹೆಚ್. ವಿಜಯಶಂಕರ ಶನಿವಾರ ಭೇಟಿ ನೀಡಿದರು.

ಬಳಿಕ ಭೀಮವ್ವ ಶಿಳ್ಳೇಕ್ಯಾತರ ಅವರನ್ನು ಸನ್ಮಾನಿಸಿ, ಮೇಘಾಲಯ ರಾಜಭವನದ ಉಡುಗೊರೆ ನೀಡಿದರು. ತೊಗಲುಗೊಂಬೆಯಾಟ ಕಲೆಯ ವೈಶಿಷ್ಟತೆ, ಹಿನ್ನೆಲೆ ಮತ್ತು ಗೊಂಬೆಯಾಟ ಆಡಿಸುವ ವಿಧಾನಗಳ ಬಗ್ಗೆ ತಿಳಿದುಕೊಂಡರು.

ಇದನ್ನೂ ಓದಿ:ಹೈಕಮಾಂಡ್ ‌ನನ್ನನ್ನ ಪರಿಗಣಿಸಿದರೆ ರಾಜ್ಯಾಧ್ಯಕ್ಷ ಆಗೋಕೆ‌ ಸಿದ್ದ- ಕುಮಾರ್ ಬಂಗಾರಪ್ಪ

ಭೀಮವ್ವ ಹಾಗೂ ಅವರ ಕುಟುಂಬದವರು ಹಾಡಿದ ಹಾಡುಗಳನ್ನು ಆಲಿಸಿದ ರಾಜ್ಯಪಾಲರು, ಮೇಘಾಲಯದ ರಾಜಭವನದಲ್ಲಿ ಈ ಕಲೆ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಬೇಕು. ಇದೇ ಕಲಾವಿದರನ್ನು ಕರೆಯಿಸಬೇಕು ಎಂದು ತಮ್ಮ ವಿಶೇಷ ಕರ್ತವ್ಯಾಧಿಕಾರಿಗೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹೇಮಲತಾ ನಾಯಕ, ಕೊಪ್ಪಳ ಜಿಲ್ಲೆಯ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ, ಬಸವರಾಜ ದಡೆಸುಗೂರು ಅಳವಂಡಿ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ:ಬಿಬಿಸಿ ಸುದ್ದಿ ಸಂಸ್ಥೆಗೆ ಭಾರೀ ದಂಡ – 3.44 ಕೋಟಿ ದಂಡ ವಿಧಿಸಿದ ಜಾರಿ ನಿರ್ದೇಶನಾಲಯ!

Donate Janashakthi Media

Leave a Reply

Your email address will not be published. Required fields are marked *