ಬೆಳಗಾವಿಯಿಂದ ಜನರು ಈಗಾಗಲೇ ಜಗದೀಶ್‌ ಶೆಟ್ಟರ್‌ರನ್ನು ಹೊರಗೆ ಕಳುಹಿಸುವ ತೀರ್ಮಾನ ಮಾಡಿದ್ದಾರೆ ಎಂದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಬೆಳಗಾವಿ: ಬೆಳಗಾವಿ ಜಿಲ್ಲೆ ಯಾವುದೇ ಕೊಡುಗೆಯನ್ನಾಗಲೀ, ಅಭಿವೃದ್ಧಿಯನ್ನಾಗಲೀ ಏನನ್ನೂ ಮಾಡದ ಜಗದೀಶ್‌ ಶೆಟ್ಟರ್‌ ರನ್ನು ಈಗಾಗಲೇ ಬೆಳಗಾವಿಯಿಂದ ಹೊರಗಿಡಲು ಜನರು ತೀರ್ಮಾನಿಸಿದ್ದಾರೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಸಚಿವೆ ಲಕ್ಷ್ಮೀಹೆಬ್ಬಾಳಕರ್‌ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್‌, ಜಗದೀಶ್‌ ಶೆಟ್ಟರ್‌ ಬೆಳಗಾವಿಗೆ ಏನು ಅಭಿವೃದ್ಧಿ ಮಾಡಿದ್ದಾರೆ . ಬೆಳಗಾವಿಯ ಜನರು ಅವರನ್ನು ಹೊರಗೆ ಕಳಿಸಲು ಈಗಾಗಲೇ ನಿರ್ಧಾರ ಮಾಡಾಗಿದೆ.

ಸೋಲಿನ ಹತಾಶೆಯಿಂದ ಶೆಟ್ಟರ್‌ ಸುಳ್ಳು ಹೇಳುತ್ತಿದ್ದಾರೆ ನಾನೇನು ಅಪಪ್ರಚಾರ ಮಾಡುತ್ತಿಲ್ಲ. ನಾನು ಅವರ ಮುಖಕ್ಕೆ ಕನ್ನಡಿ ತೋರಿಸುತ್ತಿದ್ದೇನೆ ಅಷ್ಟೇ ಎನ್ನುವ ಮೂಲಕ ಕಾಂಗ್ರೆಸ್ ಪಕ್ಷದವರು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎನ್ನುವ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹೇಳಿಕೆಗೆ ತಿರುಗೇಟು ನೀಡಿದರು.

ಇದನ್ನೂ ಓದಿ: ಗ್ಯಾರೆಂಟಿ ಯೋಜನೆ ಬಂದ್ ಮಾಡಿ ಎನ್ನುವವರು ಜನವಿರೋಧಿಗಳು; ಪ್ರಿಯಾಂಕ್ ಖರ್ಗೆ

ಇನ್ನು ಎಐಸಿಸಿ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಭೇಟಿ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಲಕ್ಷ್ಮೀಹೆಬ್ಬಾಳಕರ್‌,  ಬೆಳಗಾವಿ ಲೋಕಸಭಾ ಕ್ಷೇತ್ರ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಯಾವ ರೀತಿಯ ವಾತಾವರಣವಿದೆ, ಕೊನೆಯ ಕ್ಷಣದ ಮಾಹಿತಿ ಏನಿದೆ ಎಂದು ನೋಡಿಕೊಂಡು ಹೋಗಲು ಅವರು ಆಗಮಿಸಿದ್ದಾರೆ. ಅನೇಕ ವಿಷಯಗಳನ್ನು ಅವರೊಂದಿಗೆ ಚರ್ಚಿಸಲಾಗಿದೆ ಎಂದು ಸ್ಪಷ್ಟಪಡಿಸಿದರು

ಇದನ್ನೂ ನೋಡಿ: ಕೋಮುವಾದಿಗಳನ್ನು ಸೋಲಿಸುವುದು ಜಾಗೃತ ನಾಗರಿಕರ ಜವಾಬ್ದಾರಿ – ಬಂಜಗೆರೆ ಜಯಪ್ರಕಾಶ್ Janashakthi Media

Donate Janashakthi Media

Leave a Reply

Your email address will not be published. Required fields are marked *